• 08251 236599
  • 08251 236444
  • vvsputtur@gmail.com

Sri Rama High School, Kalladka

ಶ್ರೀ ರಾಮ ಪ್ರೌಢಶಾಲೆ, ಕಲ್ಲಡ್ಕ

Phone No :

About

ಇತಿಹಾಸ:

ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮಚಂದ್ರನ ಆದರ್ಶಗಳಿಗೆ ಅನುಗುಣವಾಗಿ ಭಾರತೀಯ ಸಂಸ್ಕೃತಿಯ ಶ್ರೇಷ್ಠ ತತ್ವ ಆದರ್ಶಗಳ ಪಾರಂಪರಿಕ ಹಿನ್ನಲೆಯಲ್ಲಿ ಆರಂಭವಾದ ವಿದ್ಯಾಸಂಸ್ಥೆಯು ಶ್ರೀರಾಮ ವಿದ್ಯಾಕೇಂದ್ರ. ಮಾನವೀಯ ಮೌಲ್ಯಗಳೊಂದಿಗೆ ವಿದ್ಯಾರ್ಥಿಗಳಲ್ಲಿ ದೈಹಿಕ, ಬೌದ್ಧಿಕ, ಹಾರ್ದಿಕ ಮತ್ತು ಆಧ್ಯಾತ್ಮಿಕ ಸಾಮರ್ಥ್ಯವನ್ನು ಬೆಳೆಸುವುದರೊಂದಿಗೆ ರಾಷ್ಟ್ರೀಯ ಚಿಂತನೆಯ ಸಂಸ್ಕಾರ ನೀಡುವ ಸಂಕಲ್ಪದೊಂದಿಗೆ ಶಿಕ್ಷಣ ಸಂಸ್ಥೆ ನಿರಂತರವಾಗಿ ಬೆಳೆದು ಬಂದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಸಣ್ಣ ಊರು ಕಲ್ಲಡ್ಕ. ಬಾಳ್ತಿಲ ಗ್ರಾಮದ ಹನುಮಾನ್ ನಗರದಲ್ಲಿರುವ ಪ್ರಶಾಂತ ವಾತವರಣದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವಿವಿಧ ತರಗತಿಗಳು ಕಾರ್ಯನಿರ್ವಹಿಸುತ್ತಿವೆ.

ಶ್ರೀರಾಮ ಭಜನಾ ಮಂದಿರವು ಊರಿನ ಶ್ರದ್ಧಾ ಕೇಂದ್ರವಾಗಿದ್ದು, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೇರಣೆಯ ಸ್ಥಳವಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆ ಕೇಂದ್ರವಾಗಿ ನೂರಾರು ಯುವಕರಿಗೆ ರಾಷ್ಟ್ರೀಯ ಕಾರ್ಯದಲ್ಲಿ ಸ್ಪೂರ್ತಿಯನ್ನು ನೀಡಿದೆ. ರಾಷ್ಟ್ರ ಜಾಗೃತಿಯ ಹೋರಾಟದಲ್ಲಿ ಹಲವು ನಾಯಕರನ್ನು ತೊಡಗಿಸಿಕೊಳ್ಳುವುದಕ್ಕೆ ಮಾರ್ಗದರ್ಶನ ಇಲ್ಲಿಂದ ಸಿಕ್ಕಿದೆ.

1980ರಲ್ಲಿ  ಇಲ್ಲಿನ ಕಾರ್ಯಕರ್ತರ ಚಿಂತನೆಯ ಫಲವಾಗಿ ಊರಿಗೆ ಅತಿ ಅಗತ್ಯವಾಗಿ ಬೇಕಾಗಿದ್ದ ಪ್ರೌಢಶಾಲೆಯ ಶ್ರೀರಾಮ ಭಜನಾ ಮಂದಿರಲ್ಲಿ ಆರಂಭಗೊಂಡಿತು. ಸುತ್ತುಮುತ್ತಲಿನ ಜನ ಆರ್ಥಿಕವಾಗಿ ಬಡತನದಲ್ಲಿದ್ದರೂ ತಮ್ಮ ಮಕ್ಕಳಿಗೆ ಸೂಕ್ತ ಶಿಕ್ಷಣವನ್ನು ಕೊಡಬೇಕೆಂಬ ಹೃದಯವಂತಿಕೆಯನ್ನು ಹೊಂದಿದ್ದರು. ಪುತ್ತೂರು ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಶ್ರೀರಾಮ ಪ್ರೌಢಶಾಲೆಯು ಆರಂಭಗೊಳ್ಳುವ ಮೂಲಕ ಈಗಿನ ಬೃಹತ್ ವಿದ್ಯಾಸಂಸ್ಥೆಗೆ ನಾಂದಿಯಾಯಿತು. ಆರಂಭದಲ್ಲಿ ಶಿಕ್ಷಣ ಸಂಸ್ಥೆಗೆ ಕಲ್ಲಡ್ಕ ಪೇಟೆಯ ಸಮೀಪದ ೯ ಎಕ್ರೆ ಸ್ಥಳವನ್ನು ಸಂಸ್ಥೆಗೆ ಪಡೆಯುವಲ್ಲಿ ಹಲವು ಹೋರಾಟವನ್ನೇ ಮಾಡಬೇಕಾಯಿತು. ಮತೀಯ ಹಾಗೂ ರಾಜಕೀಯ ಶಕ್ತಿಗಳ ಹಲವು ಅಡೆತಡೆಗಳನ್ನು ಎದುರಿಸಿ ಪ್ರಕೃತಿಯ ಸುಂದರ ಪರಿಸರದಲ್ಲಿ ಉಡುಪಿ ಪೇಜಾವರ ಮಠದ ಪೂಜ್ಯ ಶ್ರೀಶ್ರೀಶ್ರೀ ವಿಶ್ವೇಶ್ವತೀರ್ಥ ಶ್ರೀ ಪಾದಂಗಳವರು ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಮಾಡಿದ್ದರು. ಈ ಸಂದರ್ಭದಲ್ಲಿ ಪ್ರೌಢಶಾಲೆಯನ್ನು ಕಾರ್ಯಕ್ರಮಯು ನಡೆಯದಂತೆ ಮತೀಯ ರಾಜಕೀಯ ಒತ್ತಡಕ್ಕೆ ಮಣಿದು ಸರಕಾರವು ೧೪೪ನೇ ಸೆಕ್ಷನ್ ಜಾರಿಗೊಳಿಸಿದ್ದು, ಒಂದು ಕಹಿ ನೆನಪಾಗಿದೆ. ಕೊನೆಗೂ ಆಡಳಿತ ಮಂಡಳಿಯು ಯಶಸ್ವಿಯಾಗಿ ನಿವೇಶನವನ್ನು ಪಡೆದು ಪ್ರೌಢಶಾಲಾ ಕಟ್ಟಡವನ್ನು ನಿರ್ಮಿಸಿ ಗ್ರಾಮೀಣ ಪರಿಸರದ ವಿದ್ಯಾರ್ಥಿಗಳಿಗೆ ಪ್ರೌಢ ಶಿಕ್ಷಣದ ಅನುಕೂಲವನ್ನು ಪೂರೈಸಿರುವುದು ಒಂದು ಇತಿಹಾಸ.

ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಸಿಗಬೇಕು ಆ ಮೂಲಕ ಸಮಾಜ ರಾಷ್ಟ್ರಕ್ಕೆ ಶಕ್ತಿಯಾಗಬೇಕು ಭಾರತಿಯ ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಿಕ್ಷಣ ಮಕ್ಕಳಿಗೆ ಸಿಗಬೇಕು ಎಂಬುದನ್ನು ವಿದ್ಯಾಕೇಂದ್ರದ ಆಡಳಿತ ಮಂಡಳಿಯು ಮನಗಂಡು ೧೯೮೮ರಲ್ಲಿ ಶ್ರೀರಾಮ ಶಿಶುಮಂದಿರವನ್ನು ಪ್ರಾರಂಭಿಸಿತು. ಸ್ಥಳೀಯರ ಉತ್ತಮ ಪ್ರತಿಕ್ರಿಯೆಯೊಂದಿಗೆ ೧೯೮೯ರಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆಯು ಆರಂಭಗೊಂಡಿತು.
ಹನುಮಾನ್ ನಗರದ ಪ್ರಕೃತಿಯ ಮಡಿಲಲ್ಲಿ ಗುರುಕುಲ ಮಾದರಿಯ ವಿಶಿಷ್ಟ ಕಟೀರಗಳಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆಯು ತರಗತಿಗಳನ್ನು ನಡೆಸುತ್ತಿದೆ.  ಮಕ್ಕಳಿಗೆ ಆನಂದದಾಯಕ ಕಲಿಕೆಗೆ ಬೇಕಾದ ಪರಿಸರವನ್ನು ಒದಗಿಸಿವೆ. ಶಾಲಾ ಉದ್ಯಾನ ಸಹಿತ ಪ್ರಾಣಿ ಪಕ್ಷಿಗಳ ಒಡನಾಟವು ಮಕ್ಕಳಲ್ಲಿ ಜೈವಿಕ ಪರಿಸರದ ಸಂಬಂಧವನ್ನು ಬೆಸೆಯುವಂತೆ ಮಾಡಿದೆ.

ಇಲ್ಲಿ ತರಗತಿಯ ಕೊಠಡಿಗಳು ಮಹಾ ಪುರುಷರ ನಿತ್ಯ ಸ್ಮರಣೆಗೆ ಅನುಕೂಲವಾಗುವಂತೆ ಶಬರಿ, ಅಬ್ಬಕ್ಕ, ಬಾಹುಬಲಿ, ಶಿವಾಜಿ, ಶ್ರೀಕೃಷ್ಣ, ಶಾರದಾ, ಕೇಶವ, ಮಾಧವ, ಯಾದವ, ಈ ಹೆಸರುಗಳಿಂದ ಗುರುತಿಸಲಾಗುತ್ತಿದೆ. ತರಗತಿಗಳಲ್ಲಿ ಕುಟೀರದ ಪರಿಸರವು ಗುರುಕುಲದಂತಿದ್ದು ಇಲ್ಲಿ ಶ್ರೀಮಾನ್ ಹಾಗೂ ಮಾತಾಜಿಯವರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಾರೆ. ಪುರಾತನವಾಗಿದ್ದು ದೇವ ಭಾಷೆಯೆಂದು ಪರಿಗಣಿಸಲ್ಪಟ್ಟ ಸಂಸ್ಕೃತವನ್ನು ಎಲ್ಲಾ ಮಕ್ಕಳಿಗೆ ಕಲಿಯುವ ಅವಕಾಶವಿದೆ.

ಪ್ರತಿದಿನ ಸರಸ್ವತಿ ವಂದನೆಯೊಂದಿಗೆ ನಿತ್ಯ ಪ್ರಾರ್ಥನೆ ನಡೆಯುತ್ತದೆ. ಭಗವದ್ಗೀತೆ, ವೇದಗಳ ಮಂತ್ರೋಚ್ಚಾರಣೆ, ಸ್ತೋತ್ರಗಳು ಹಾಗೂ ಸೂಕ್ತಿಗಳು ನಿತ್ಯ ಪ್ರಾರ್ಥನೆಯಲ್ಲಿ ಹೇಳುವ ಮೂಲಕ ಮಕ್ಕಳಲ್ಲಿ ಉತ್ತಮ ಅಭ್ಯಾಸವನ್ನು ಮೈಗೂಡಿಸಿಕೊಳ್ಳುವಂತೆ ಮಾಡಲಾಗುತ್ತಿದೆ.

ರಾಷ್ಟ್ರಿಯ ಹಬ್ಬಗಳು ಮತ್ತು ಧಾರ್ಮಿಕ ಹಬ್ಬಗಳ ಆಚರಣೆಯ ಮೂಲಕ ಸಂಸ್ಕೃತಿ ಹಾಗೂ ಭಾವೈಕ್ಯವನ್ನು ಮಕ್ಕಳು ಬೆಳೆಸಿಕೊಳ್ಳುವುದಕ್ಕೆ ಅವಕಾಶವಾಗಿದೆ.

ವಿದ್ಯಾಕೇಂದ್ರವು ಸಾಮಾಜಿಕ ಪರಿವರ್ತನೆಯ ಮತ್ತು ಸಂಸ್ಕಾರದ ಕೇಂದ್ರವಾಗಿರಬೇಕೆಂಬುದು ವಿದ್ಯಾಕೇಂದ್ರದ ಸಂಸ್ಥಾಪಕರ ಆಶಯವಾಗಿದೆ. ಅಶನ, ಆರೋಗ್ಯ ಮತ್ತು ಶಿಕ್ಷಣ ಎಲ್ಲರಿಗೂ ಉಚಿತವಾಗಿ ಸಿಗಬೇಕು ಎಂಬ ಆರ್ಷೇಯ  ಚಿಂತನೆಯಂತೆ ವಿದ್ಯಾಕೇಂದ್ರವನ್ನು ನಡೆಸಿಕೊಂಡು ಬರಬೇಕೆಂದು ಆಡಳಿತ ಮಂಡಳಿಯ ದೂರದೃಷ್ಟಿಯಾಗಿದೆ. ಆ ಹಿನ್ನಲೆಯಲ್ಲಿ ಸಜ್ಜನರ ಸಹಕಾರ ಮತ್ತು ಕೊಡುಗೈ ದಾನಿಗಳ ಉದಾರತೆಯಿಂದ ಶಿಕ್ಷಣ ಸಂಸ್ಥೆಯು ವಿವಿಧ ಹಂತಗಳಲ್ಲಿ ವಿಸ್ತರಿಸಿಕೊಳ್ಳುತ್ತಿದೆ.

2006ರಲ್ಲಿ ಪದವಿ ಪೂರ್ವ ತರಗತಿಗಳು ಕಲಾ, ವಾಣಿಜ್ಯ, ವಿಜ್ಞಾನ ವಿಷಯಗಳೊಂದಿಗೆ ಆರಂಭಗೊಂಡಿದೆ.2009ರಲ್ಲಿ ಬಿ.ಬಿ.ಯಂ ಮತ್ತು ಬಿ.ಕಾಂ ಪದವಿ ತರಗತಿಗಳು ಆರಂಭಗೊಂಡಿವೆ.
ಸುಮಾರು 20ಎಕ್ರೆ ಪ್ರದೇಶದಲ್ಲಿ ವಿಶಾಲ ಆಟದ ಮೈದಾನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಹಾಗೂ ಪದವಿ ತರಗತಿಳಿಗೆ ಪ್ರತ್ಯೇಕ ಕಟ್ಟಡಗಳು ಇವೆ. ವೇದವ್ಯಾಸ, ಮಧುಕರ, ಅಜಿತ ಸಭಾಂಗಣಗಳು ಸಾಮೂಹಿಕ ಪ್ರಾರ್ಥನೆ ಹಾಗೂ ಸಭೆ ಸಮಾರಂಭಗಳಿಗಾಗಿ ನಿರ್ಮಾಣವಾಗಿದೆ.

———————————————-

ಆಡಳಿತ ಮಂಡಳಿ

ಕ್ರ.ಸಂ. ಶ್ರೀರಾಮ ವಿದ್ಯಾಕೇಂದ್ರ ಆಡಳಿತ ಮಂಡಳಿ
1 ಶ್ರೀ ನಾರಾಯಣ ಸೋಮಯಾಜಿ ಅಧ್ಯಕ್ಷರು
2 ಶ್ರೀ ಡಾ. ಪ್ರಭಾಕರ ಭಟ್ ಕಾರ್ಯದರ್ಶಿ
3 ಶ್ರೀ ಪದ್ಮನಾಭ ಕೊಟ್ಟಾರಿ ಸದಸ್ಯರು
4 ಶ್ರೀ ಕಜಂಪಾಡಿ ಸುಬ್ರಹಣ್ಯ ಭಟ್ ಸದಸ್ಯರು
5 ಶ್ರೀ ಜಯಶ್ಯಾಮ ಸದಸ್ಯರು
6 ಶ್ರೀ ಗೋಪಾಲ ಶೆಣೈ ಸದಸ್ಯರು
7 ಶ್ರೀ ಮಹೇಶ್ವರ ಭಟ್ ಸದಸ್ಯರು
8 ಶ್ರೀ ನಳಿನ್ ಕುಮಾರ್ ಕಟೀಲ್ ಸದಸ್ಯರು
9 ಶ್ರೀ ವಿಪಿನ್ ಕುಮಾರ್ ಸದಸ್ಯರು
10
ಶ್ರೀ ಜ್ಯೋತಿ ನಾಯಕ್
ಸದಸ್ಯರು
11 ಶ್ರೀಮತಿ ಮಲ್ಲಿಕಾ ಶೆಟ್ಟಿ ಸದಸ್ಯರು
12 ಶ್ರೀ ಜಗದೀಶ್ ಸದಸ್ಯರು
13 ಶ್ರೀ ನಾಗೇಶ್ ಸದಸ್ಯರು
14 ಶ್ರೀ ಚೆನ್ನಪ್ಪ ಕೋಟ್ಯಾನ್ ಸದಸ್ಯರು
15 ಸದಸ್ಯರು

 ಶಾಲಾಭಿವೃದ್ದಿ ಸಮಿತಿ

ಕ್ರ.ಸಂ. ಶ್ರೀರಾಮ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ
1 ಶ್ರೀ ಸತೀಶ ಭಟ್ ಶಿವಗಿರಿ ಅಧ್ಯಕ್ಷರು
2 ಶ್ರೀ ಜಯರಾಮ ರೈ ಕಾರ್ಯದರ್ಶಿ
3 ಶ್ರೀ ರಾಕೊಡಿ   ಈಶ್ವರ ಭಟ್ ಸದಸ್ಯರು
4 ಶ್ರೀ  ಗಿಲ್ಕಿನ್ಜ ಕೃಷ್ಣ  ಭಟ್ ಸದಸ್ಯರು
5 ಶ್ರೀ ಶಂಬು ಭಟ್ ಸದಸ್ಯರು
6 ಶ್ರೀ ಪದ್ಮನಾಭ ಪಿ .ಕೆ ಸದಸ್ಯರು
7 ಶ್ರೀ ಸುಬ್ರಹ್ಮಣ್ಯ ಭಟ್ ಸದಸ್ಯರು
8 ಶ್ರೀ ಆನಂದ ಶೆಟ್ಟಿ ಸದಸ್ಯರು
9 ಶ್ರೀ ನಾಗರಾಜ ಸದಸ್ಯರು
10
ಶ್ರೀ ನಾರಾಯಣ ಗೌಡ
ಸದಸ್ಯರು
11 ಶ್ರೀ ಲಕ್ಷ್ಮಣ ಸದಸ್ಯರು
12 ಶ್ರೀ ಜಯರಾಮ ಸುದೆಕಾರ್ ಸದಸ್ಯರು
13 ಶ್ರೀ ದಯಾನಂದ ಸದಸ್ಯರು
14 ಶ್ರೀ ಶಿವಶಂಕರ ಭಟ್ ಸದಸ್ಯರು
15 ಶ್ರೀಮತಿ ಪುಷ್ಪ ಪರ್ಕಳ ಸದಸ್ಯರು
16 ಶ್ರೀಮತಿ ಚಿನ್ನಮ್ಮ ಸದಸ್ಯರು

 

Photos

News & Events

ಶಿಕ್ಷಕರ ದಿನಾಚರಣೆ

ಶಿಕ್ಷಕರು ಕೇವಲ ಮಾಹಿತಿಯನ್ನು ನೀಡುವ ಕಾರ್ಯವನ್ನು ಮಾಡುವುದಲ್ಲ ವಿದ್ಯಾರ್ಥಿಗಳ ಮನದಲ್ಲಿ ಉತ್ತಮ ಭಾವ ಉದ್ದೀಪನ ಮಾಡುವ ಕಾರ್ಯವನ್ನು ಮಾಡಬೇಕು. ಶಿಕ್ಷಕ ವಿದ್ಯಾರ್ಥಿಗಳ ಜೀವನಕ್ಕೆ ಕೇವಲ ಬೆಳಕನ್ನು ನೀಡುವುದಲ್ಲದೇ ಸಮಾಜಕ್ಕೆ ಆದರ್ಶವಾಗಿ ಸಮಾಜವನ್ನು ತಿದ್ದುವ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕು. ಈ ರೀತಿಯ ಆದರ್ಶವನ್ನು ಬೆಳೆಸಿಕೊಂಡವರು ಸರ್ವಪಲ್ಲಿ ರಾಧಾಕೃಷ್ಣನ್‌ರವರು. ಅವರ ಜೀವನ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಮಧುಕರ ಸಭಾಂಗಣದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀ ವಿನೋದ್ ತಿಳಿಸಿದರು.

DSCN0381

DSCN0374

ಪ್ರಾರಂಭದಲ್ಲಿ ವಿದ್ಯಾರ್ಥಿ ಪ್ರಮುಖರು ಎಲ್ಲಾ ಶಿಕ್ಷಕರಿಗೆ ಹೂಗುಚ್ಚ ನೀಡಿ ಆಶೀರ್ವಾದ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶ್ರೀ ರಮೇಶ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. 9 ನೇ ನಿವೇದಿತಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ದೀಕ್ಷಿತ್ ವಂದಿಸಿದರು.

ರಕ್ಷಾಬಂಧನ, ಸಂಸ್ಕೃತೋತ್ಸವ ಕಾರ್ಯಕ್ರಮ

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಭಾರತೀಯರೆಲ್ಲರೂ ಸಹೋದರರಂತೆ ಪರಸ್ಪರ ಸಾಮರಸ್ಯದಿಂದ ಜೀವಿಸಿದರೆ ಭಾರತ ಅಭಿವೃದ್ಧಿಯಾಗುವುದು. ರಕ್ಷಾಬಂಧನ ಉತ್ಸವ ಆಚರಿಸುವ ಮೂಲಕ ಜಾತಿ, ಮತ, ಭಾಷೆ ಎಂಬ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಬಾಳುವಂತಾಗಬೇಕು, ಒಳಗಿನ ಭಿನ್ನಮತಗಳನ್ನು ಹೊರಗಿನ ಶತ್ರುಗಳನ್ನು ಏಕತೆಯಿಂದ ಎದುರಿಸಬೇಕೆಂದು ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಪರಮೇಶ್ವರ ಹೆಗ್ಡೆ ಹೇಳಿದರು.

DSCN0030

raksha-bandana

ಅವರು ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆದ ರಕ್ಷಾಬಂಧನ ಮತ್ತು ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸಂಸ್ಕೃತ ಕಲಿಯುವುದರಿಂದ ಸುಸಂಸ್ಕೃತರಾಗುತ್ತೇವೆ. ಭಾಷೆಯ ಬಳಕೆಯಿಂದ ಭಾಷೆ ಉಳಿಯುತ್ತದೆ. ಮಾತಿನಲ್ಲಿ ನಯವಿನಯವಿದ್ದಾಗ ಮಾತ್ರ ಉಳಿದವರ ಮನ ಪರಿವರ್ತನೆಯಾಗುವುದು ಎಂದು ಹೆಗ್ಡೆ ತಿಳಿಸಿದರು.

ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ|| ಪ್ರಭಾಕರ ಭಟ್, ಗೋಳ್ತಮಜಲು ಪಂಚಾಯತ್ ಸದಸ್ಯ ಮೋನಪ್ಪ ದೇವಸ್ಯ, ಕಾರ್ಯ ನಿರ್ವಹಣಾಧಿಕಾರಿ ವಸಂತಮಾಧವ, ಮುಖ್ಯೋಪಾಧ್ಯಾಯರಾದ ರಮೇಶ್ ಎನ್. ಉಪಸ್ಥಿತರಿದ್ದರು. ಕಾರ್‍ಯಕ್ರಮದಲ್ಲಿ ಅತಿಥಿಗಳಾಗಿ ಶೋಭಾ ಆರ್.ಶೆಟ್ಟಿ, ಶರೀಫ್ ಹಾಜಿ, ಹನೀಫ್, ಮಜೀದ್, ಫಾರೂಕ್, ಅನಂತ ಶೆಟ್ಟಿ ಉಪಸ್ಥಿತರಿದ್ದರು.

ಕಾರ್‍ಯಕ್ರಮವನ್ನು ಪೂಜಾ ಆರ್. ಶೆಟ್ಟಿ ೮ ಏಕಲವ್ಯ ಸ್ವಾಗತಿಸಿ, ರಕ್ಷಾ ೮ ಏಕಲವ್ಯ ನಿರೂಪಿಸಿ, ಮೇದಿನಿ 8 ಏಕಲವ್ಯ ವಂದಿಸಿದರು.

ಪ್ರತಿಭಾ ಕಾರಂಜಿ

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 9ನೇ ತರಗತಿಯ ಗಾಯತ್ರಿ ಭಟ್ ಹಿಂದೂಸ್ಥಾನಿ ಸಂಗೀತ ಸ್ಪರ್ಧೆಯಲ್ಲಿ, 9ನೇ ತರಗತಿಯ ಸ್ಪೂರ್ತಿ ರಂಗೋಲಿ ಸ್ಪರ್ಧೆಯಲ್ಲಿ ಹಾಗೂ 9ನೇ ತರಗತಿಯ ಪ್ರಜ್ವಲ್ ರೈ ಮಿಮಿಕ್ರಿ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಾಲೂಕು ಮಟ್ಟದಲ್ಲಿ 10 ನೇ ತರಗತಿಯ ಗೋವಿಂದ ಕೃಷ್ಣ ಎ. ಸಂಸ್ಕೃತ ಭಾಷಣ, 9ನೇ ತರಗತಿಯ ಗಾಯತ್ರಿ ಭಟ್ ಗಝಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ 8 ನೇ ತರಗತಿಯ ಶ್ರೇಯಸ್ ಯಕ್ಷಗಾನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

pratibha

ಪಾಲಕರ ಸಭೆ

ಸಾವಿರಾರು ವಿದ್ಯಾರ್ಥಿಗಳು ಸಮಾಜಕ್ಕಾಗಿ ಬದುಕುವಂತೆ ಪ್ರೇರೇಪಿಸುವ ರಾಷ್ಟ್ರಪ್ರೇರಿತ ಭಾರತೀಯ ಶಿಕ್ಷಣವನ್ನು ವಿದ್ಯಾಕೇಂದ್ರ ನೀಡುತ್ತಿದೆ. ಈ ರೀತಿಯಲ್ಲಿ ರಾಷ್ಟ್ರೀಯ ದೃಷ್ಟಿಕೋನ, ಸಂಸ್ಕಾರಯುತ ಶಿಕ್ಷಣ ಶಾಲೆಯಲ್ಲಿ ಮಾತ್ರ ಸೀಮಿತವಾಗದೇ, ಮನೆಯಲ್ಲಿ ಅವುಗಳನ್ನು ಮುಂದುವರೆಸುವಂತೆ ಪೋಷಕರು ತಮ್ಮ ಮಕ್ಕಳಿಗೆ ಪ್ರೇರಣೆ ನೀಡುವುದು ಅವಶ್ಯಕ. ಈ ರೀತಿಯಾದಾಗ ಮಾತ್ರ ಮಗುವಿನ ಪರಿಪೂರ್ಣ ವ್ಯಕ್ತಿತ್ವದ ಬೆಳವಣಿಗೆ ಸಾಧ್ಯ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಡಾ||ಪ್ರಭಾಕರಭಟ್ ಕಲ್ಲಡ್ಕ ತಿಳಿಸಿದರು. ಅವರು ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ದಿನಾಂಕ: 4-8-2015 ರಂದು ನಡೆದ ವಿಭಾಗದ ಪೋಷಕರ ಸಭೆಯನ್ನುದ್ದೇಶಿಸಿ ಮಾರ್ಗದರ್ಶನ ನೀಡಿದರು.

DSCN0003

ಪೋಷಕರ ಪರವಾಗಿ ಮಾತನಾಡಿದ ಶ್ರೀ ರಾಕೋಡಿ ಈಶ್ವರಭಟ್‌ರವರು ಅಧ್ಯಾಪಕರ ಆಡಳಿತ ಮಂಡಳಿ ಶ್ರಮದಿಂದ ನನ್ನ ಮಕ್ಕಳು ಉತ್ತಮ ಸಂಸ್ಕಾರದೊಂದಿಗೆ ಉತ್ತಮ ಅಂಕ ಪಡೆದು ತೇರ್ಗಡೆ ಹೊಂದಿದ್ದಾರೆ. ಇದು ನನ್ನನ್ನು ಅತ್ಯಂತ ಸಂತೋಷಕರವಾಗಿಸಿದೆ ಎಂದು ತಿಳಿಸಿದರು. ಶ್ರೀಮತಿ ವಾರಿಜ, ಶ್ರೀಮತಿ ಇರಾ ಶೆಟ್ಟಿ, ಶ್ರೀಮತಿ ಪ್ರೇಮಲತಾ, ಅಭಿಪ್ರಾಯ ಹಂಚಿಕೊಂಡರು.

ವೇದಿಕೆಯಲ್ಲಿ ಪೊಳಲಿ ರಾಮಕೃಷ್ಣ ತಪೋವನ ಸ್ವಾಮಿಗಳಾದ ಚೈತನ್ಯಾನಂದ ಸ್ವಾಮೀಜಿ, ಪದ್ಮಾನಂದ ಸ್ವಾಮೀಜಿ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ವಿದ್ಯಾಕೇಂದ್ರದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ವಸಂತಮಾಧವ, ಪ್ರೌಢಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ವಿಶ್ವನಾಥ ಪ್ರಭು, ಕಾರ್ಯದರ್ಶಿ ಶ್ರೀ ಮುತ್ತಪ್ಪಮೂಲ್ಯ, ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ರಮೇಶ್ ಶ್ರೀಮಾನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 8, 9, 10 ನೇ ವಿಭಾಗದ ವರದಿಯನ್ನು ಮಂಡಿಸಲಾಯಿತು. ಶ್ರೀ ಜಯಾನಂದ ಪೆರಾಜೆ 10 ನೇ ತರಗತಿ, ಶ್ರೀ ಗೋಪಾಲ್ ಶ್ರೀಮಾನ್ 9 ನೇ ತರಗತಿ, ಶ್ರೀಮತಿ ಸಂಧ್ಯಾ 8 ನೇ ತರಗತಿ ವರದಿ ಮಂಡಿಸಿದರು. ಕಾರ್ಯಕ್ರಮದಲ್ಲಿ ಶ್ರೀ ರಮೇಶ್ ಶ್ರೀಮಾನ್ ಸ್ವಾಗತಿಸಿ, ಶ್ರೀಮತಿ ಶಾಂಭವಿ ವಂದಿಸಿ, ಶ್ರೀ ಜಿನ್ನಪ್ಪ ಶ್ರೀಮಾನ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಗಿಲ್ ವಿಜಯ ದಿವಸ

ಜಮ್ಮುಕಾಶ್ಮೀರ ಭಾರತದ ಮುಕುಟಪ್ರಾಯವಾಗಿ ಕಂಗೊಳಿಸುವ ರಾಜ್ಯ. ಪ್ರವಾಸಿಗರ ಸ್ವರ್ಗ ತಾಣವಾದ ಕಾಶ್ಮೀರದ ಕಾರ್ಗಿಲ್ ಪ್ರದೇಶದ ಮೇಲೆ 1999ರಲ್ಲಿ ನಡೆದ ಪಾಕಿಸ್ತಾನದ ದಾಳಿ ಅತ್ಯಂತ ಶೋಚನೀಯ ಸಂಗತಿಯಾಗಿದೆ. ಈ ಕಾರ್ಗಿಲ್ ಕದನದಲ್ಲಿ ಕೆಚ್ಚೆದೆಯ ಹೋರಾಟ ನಡೆಸಿದ ಸೈನಿಕರ ಹೋರಾಟದ ಫಲವೇ ಕಾರ್ಗಿಲ್ ವಿಜಯೋತ್ಸವ. ನಿರಂತರ ದೇಶಸೇವೆಯಲ್ಲಿ ತೊಡಗಿರುವ ಸೈನಿಕರು ನಮ್ಮೆಲ್ಲರಿಗೂ ಪ್ರೇರಣಾದಾಯಿಗಳು’ ಎಂದು ಶ್ರೀ ರಾಧಾಕೃಷ್ಣ ಅಡ್ಯಂತಾಯ, ಶ್ರೀರಾಮ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಮಧುಕರ ಸಭಾಂಗಣದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಉದ್ದೇಶಿಸಿ ಬೌದ್ಧಿಕ್ ನೀಡಿದರು.

File02881

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣಾದಾಯಿಯಾದ ‘ವಂದೇ ಮಾತರಂ’ ಗೀತೆಗೆ ಹೆಜ್ಜೆ ಹಾಕಿದರು. ಕಾರ್ಯಕ್ರವನ್ನು ಮೇಧಿನಿ (8 ಏಕಲವ್ಯ) ನಿರೂಪಿಸಿದರು. ಪ್ರೌಢಶಾಲಾ ಇಂಗ್ಲೀಷ್ ಶಿಕ್ಷಕರಾದ ಶ್ರೀ ಪ್ರಶಾಂತ ನೇರೋಳು ಕಾರ್ಯಕ್ರಮ ಸಂಯೋಜಿಸಿದರು.

ಸಂಘಗಳ ಉದ್ಘಾಟನೆ

ವಿದ್ಯಾರ್ಥಿಗಳ ಸಾಧನೆ, ಸ್ವ-ಪ್ರತಿಭೆ, ಜ್ಞಾನವನ್ನು ವೃದ್ಧಿಸುವಲ್ಲಿ ವಿವಿಧ ಸಂಘಗಳು ಸಹಕಾರಿಯಾಗಲಿ. ವಿವಿಧ ಸಂಘಗಳ ಯೋಜನೆ ಭಾರತೀಯ ಪರಿಕಲ್ಪನೆ, ಪುನರ್ಜೀವನದ ನಿಟ್ಟಿನಲ್ಲಿ ನಡೆಯಲಿ ಎಂದು ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಪ್ರೌಢವಿಭಾಗದ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ವಸಂತಮಾಧವ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀರಾಮ ವಿದ್ಯಾಕೇಂದ್ರ ತಿಳಿಸಿದರು. ಮತ್ತು ಸಂಘದ ಎಲ್ಲಾ ಪ್ರಮುಖರಿಗೆ ಸಸಿಗಳನ್ನು ವಿತರಿಸಿದರು.

sanga

ಕಾರ್ಯಕ್ರಮದಲ್ಲಿ ಪ್ರೌಢವಿಭಾಗದ ಮುಖ್ಯ ಶಿಕ್ಷಕರಾದ ಶ್ರೀ ರಮೇಶ್ ಶ್ರೀಮಾನ್ ಉಪಸ್ಥಿತರಿದ್ದರು. ಶ್ರೀ ಗೋಪಾಲ್ ಶ್ರೀಮಾನ್ ಸ್ವಾಗತಿಸಿ, ಶ್ರೀಮತಿ ಸೌಮ್ಯ ವಂದಿಸಿ, ಶ್ರೀ ಜಿನ್ನಪ್ಪ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಘಗಳಿಂದ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳನ್ನು ನಡೆಸಿದರು.

ಲಯನ್ಸ್ ಕ್ಲಬ್ 100 ವರ್ಷಾಚರಣೆ ನಿಮಿತ್ತ ಪರಿಸರ ಸಂರಕ್ಷಣೆ ಕಾರ್ಯಕ್ರಮ 15-07-2015

ಲಯನ್ಸ್ ಕ್ಲಬ್ ಮತ್ತು ಶ್ರೀರಾಮ ವಿದ್ಯಾಕೇಂದ್ರ ಇದರ ವತಿಯಿಂದ ಪರಿಸರ ಸಂರಕ್ಷಣೆ ಮತ್ತು 1000 ಗಿಡಗಳನ್ನು ನೆಡುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ 100 ವರ್ಷ ಆಚರಣೆಯ ಹಿನ್ನಲೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

lions

ವಿದ್ಯಾಕೇಂದ್ರದ ಸಂಚಾಲಕರು ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಕದಂಬ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೊತೆಗೆ ಪರಿಸರ ಪ್ರೇಮಿ ದಿನೇಶ್ ನಾಯಕ್, ಲಯನ್ಸ್ ಜಿಲ್ಲಾ ಗವರ್ನರ್ ಕವಿತಾ ಎಸ್. ಶಾಸ್ತ್ರಿ, ಮಾಜಿ ಗವರ್ನರ್ ಕೆ.ಸಿ ಪ್ರಭು, ಲಯನ್ಸ್ ಆಶಾ ಸಿ. ಶೆಟ್ಟಿ, ಲಯನ್ಸ್ ಆಶಾ ಹೆಜಮಾಡಿ, ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಮುಖ್ಯ ಕಾರ್ಯನಿರ್ವಾಹಕ ವಸಂತ ಮಾಧವ, ಪದವಿ ಕಾಲೇಜಿನ ಪ್ರಾಂಶುಪಾಲರು ಕೃಷ್ಣಪ್ರಸಾದ್, ಪದವಿ ಪೂರ್ವ ವಿಭಾಗದ ವಸಂತ ಬಲ್ಲಾಳ, ಡಾ| ಕಮಲಾ ಪ್ರಭಾಕರ ಭಟ್, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭ – 11-07-2015

ಶಿಕ್ಷಕರು ತಮ್ಮ ನಡೆನುಡಿಗಳಲ್ಲಿ ವಿದ್ಯಾರ್ಥಿಗಳಿಗೆ ಆದರ್ಶವಾಗಿರಬೇಕು. ಅಧ್ಯಾಪಕರು ವಿದ್ಯಾರ್ಥಿಯ ಜೊತೆಯಲ್ಲಿದ್ದು ಗುಣನಡತೆ ತಿದ್ದುವುದಲ್ಲದೆ ದೇಶಕ್ಕಾಗಿ ಬದುಕುವುದನ್ನು ಕಲಿಸಿಕೊಡಬೇಕು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು.

ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ದ.ಕ. ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

DSCN0246

ಭಾರತದ ಮಕ್ಕಳು ಇತರ ದೇಶಗಳ ಮಕ್ಕಳಿಗಿಂತಲೂ ಬುದ್ಧಿವಂತರು. ಪ್ರತಿಯೊಂದು ಮಗುವಿನಲ್ಲಿಯೂ ವಿಶೇಷತೆ ಇದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು. ಭಾರತೀಯ ಕುಟುಂಬ ಪದ್ಧತಿಯಲ್ಲಿ ಬೆಳೆಯುವ ಮಕ್ಕಳು ಹಿರಿಯರ ಬಗ್ಗೆ ಗೌರವ ಹೊಂದಿರುತ್ತಾರೆ. ಅವರಿಗೆ ಸೂಕ್ತ ಮಾರ್ಗದರ್ಶನ ಶಿಕ್ಷಕರಿಂದ ಸಿಗಬೇಕು ಎಂದರು.

ರಾಮಾಯಣ, ಮಹಾಭಾರತ, ಭಗವದ್ಗೀತೆ, ಯೋಗದ ಬಗ್ಗೆ ಶಾಲೆಗಳಲ್ಲಿ ಶಿಕ್ಷಣದ ಅಗತ್ಯವಿದೆ. ಕಾಲ ಬದಲಾಗಿಲ್ಲ. ನಡವಳಿಕೆಯಲ್ಲಿ ಬದಲಾಗಿದ್ದು ಅದನ್ನು ಸರಿಪಡಿಸುವ ವ್ಯವಸ್ಥೆ ಶಿಕ್ಷಣದಿಂದ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿದ್ಯಾಭಾರತಿ ಜಿಲ್ಲಾಧ್ಯಕ್ಷ ಪ್ರೊ|| ಎಂ.ಬಿ.ಪುರಾಣಿಕ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಭಾರತಿ ಕರ್ನಾಟಕ ಪ್ರಾಂತ ಸಹಕಾರ್ಯದರ್ಶಿ ವಸಂತ ಮಾಧವ, ಜಿಲ್ಲಾ ಉಪಾಧ್ಯಕ್ಷ ವೆಂಕಟರಮಣರಾವ್ ಕಡಬ, ಕಾರ್ಯದರ್ಶಿ ಲೋಕಯ್ಯ ಡಿ, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ ಉಪಸ್ಥಿತರಿದ್ದರು.
ಸರಸ್ವತಿ ಪ್ರಾಥಮಿಕ ಶಾಲೆ, ಕಡಬದ ಮಾಧವ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ಶ್ರೀ ರಮೇಶ್ ಎನ್. ವಂದಿಸಿದರು. ಜಿನ್ನಪ್ಪ ಏಳ್ತಿಮಾರ್ ನಿರೂಪಿಸಿದರು.

Highslide for Wordpress Plugin