ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘವನ್ನು ವಿದುಷಿ ವಿದ್ಯಾ ಮನೋಜ್ ಕಲ್ಲಡ್ಕ ಭಗವದ್ಗೀತೆಯಲ್ಲಿ ಕೃಷ್ಣ ಅರ್ಜುನನಿಗೆ ಸಂದೇಶ ನೀಡುವ ಚಿತ್ರವನ್ನು ಪರದೆ ಸರಿಸುವ ಮೂಲಕ ಉಧ್ಘಾಟಿಸಿದರು.

ಅದೇ ದಿನ ತೃತೀಯ ವಿಭಾಗದ ವಿದ್ಯಾರ್ಥಿಗಳಿಂದ ಲೋಕ ಹಿತಂ ಮಮಕರಣೀಯಂ ಎಂಬ ಸಂದೇಶದಲ್ಲಿ ವಿವಿಧ ರೀತಿಯ ಲೋಕಕ್ಕೇ ಉತ್ತಮ ಮಾಹಿತಿ ನೀಡುವ ಸ್ವಚ್ಚತೆ, ತಾಯಿ ಬಾಂದವ್ಯ, ವಿವಿಧ ನ್ಯತ್ಯ, ನಾಟಕಗಳನ್ನು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಡಾ. ಕಮಲ .ಪ್ರಭಾಕರ ಭಟ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ರಸಾದ ಉಪಸ್ಥಿತರಿದ್ದರು. ಸಂಘದ ನಿರ್ದೇಶಕಿ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಅಕ್ಷತಾ ಸ್ವಾಗತಿಸಿ, ನಿರೂಪಿಸಿದರು.
 
															 
															 
															 
															 
															