ವಿವೇಕಾನಂದ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ 67 ವಿದ್ಯಾರ್ಥಿಗಳು ಆಯ್ಕೆ

Featured image
Leaf
Leaf

ಪುತ್ತೂರು: ಬೆಂಗಳೂರಿನ ಟಾಟಾ ಇಲೆಕ್ಟ್ರಾನಿಕ್ಸ್ ಸಿಸ್ಟಂ ಸೊಲ್ಯೂಷನ್ ಇವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಇಲ್ಲಿಯ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ನಡೆಸಿದ್ದು ಒಟ್ಟು 67 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದಲ್ಲಿ ಭಾಗವಹಿಸಿ ಹುದ್ದೆಗಳಿಗೆ ಆಯ್ಕೆಗೊಂಡಿರುತ್ತಾರೆ.
ವಿದ್ಯಾರ್ಥಿಗಳು ಪದವಿಯ ಅಂತಿಮ ಪರೀಕ್ಷೆಯನ್ನು ಪೂರ್ಣಗೊಳಿಸಿ ಜುಲೈ ತಿಂಗಳಿನಲ್ಲಿ ಹುದ್ದೆಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಹಾಗೂ ಉದ್ಯೋಗ ಹಾಗೂ ತರಬೇತಿ ಘಟಕದ ಸಂಯೋಜಕಿ ರೇಖಾ ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Related News

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”