ಕಾರ್ಗಿಲ್ ವಿಜಯೋತ್ಸವ

Leaf
Leaf

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರಭಾಸ ಮಾನವಿಕ ಸಂಘದ ವತಿಯಿಂದ ಕಾರ್ಗಿಲ್ ವಿಜಯ ದಿವಸದ ಸ್ಮರಣೆ ಕಾರ್ಯಕ್ರಮ ಅಜಿತಕುಮಾರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ|| ಪ್ರಭಾಕರ ಭಟ್ ಕಲ್ಲಡ್ಕ ಇವರು ವಹಿಸಿರುತ್ತಾರೆ. ಮುಖ್ಯ ಅತಿಥಿಯಾಗಿ ಬಂದಿರುವವರು ಆಶಾಪ್ರಸಾದ್ ರೈ, ವಿಲಾಸ್ ನಾಯಕ್ ಉಡುಪಿ, ಪ್ರಾಚಾರ್ಯ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಉಪಸ್ಥಿತರಿದ್ದರು.

DSCN0025

ಈ ಸಂದರ್ಭದಲ್ಲಿ ವೀರಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಒಂದು ನಿಮಿಷ ಮೌನಪ್ರಾರ್ಥನೆಯೊಂದಿಗೆ ವಿಜಯ ದಿವಸವನ್ನು ಆಚರಿಸಲಾಯಿತು. ಆಶಾಪ್ರಸಾದ್ ರೈ ಯವರು ಹಲವಾರು ವೀರಯೋಧರ ಕಥೆಗಳನ್ನು ತಿಳಿಸುತ್ತಾ ಇಂತಹ ಕಾರ್ಯಕ್ರಮವನ್ನು ಮಾಡಿ ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಮೂಡಿಸಬೇಕೆಂದು ತಿಳಿಸಿಕೊಟ್ಟರು.

ಮಾನವಿಕ ಸಂಘದ ವಿದ್ಯಾರ್ಥಿನಿಯರಿಂದ ದೇಶ ಭಕ್ತಿಗೀತೆಯನ್ನು ಹಾಡಿದರು.ಇತಿಹಾಸ ಉಪನ್ಯಾಸಕಿ ಶ್ರೀಮತಿ ರೇಖಾ ಸ್ವಾಗತಿಸಿ, ವಿದ್ಯಾರ್ಥಿ ಭಾಗ್ಯಶ್ರೀ ನಿರೂಪಿಸಿ, ಹರ್ಷಿತಾ ಕುಮಾರಿ ವಂದಿಸಿದರು.

Leave a Reply

Your email address will not be published. Required fields are marked *

Related News

News
01/08/2025

ವಿವೇಕಾನಂದ ಫಾರ್ಮಸ್ಯುಟಿಕಲ್ ಕಾಲೇಜಿನ ವಾರ್ಷಿಕೋತ್ಸವ

News
01/08/2025

ಕಡಬ: 26ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ

News
01/08/2025

ವಿವೇಕಾನಂದ ಕಾಲೇಜಿನಲ್ಲಿ ಡಾ.ಕೃಷ್ಣ ಕಾರಂತ ಅವರಿಗೆ ಬೀಳ್ಕೊಡುಗೆ ಸಮಾರಂಭ