ತಂತ್ರಜ್ಞಾನ ಬೆಳೆದಂತೆ ಉದ್ಯಮವೂ ಬೆಳೆಯುತ್ತದೆ: ಡಾ. ಬಾಲಸುಬ್ರಮಣ್ಯಂ

Leaf
Leaf

ಪುತ್ತೂರು: ನಮ್ಮ ಹಿರಿಯರು ಕೈಯಲ್ಲೇ ಭೂಮಿ ಅಗೆಯುತ್ತಿದ್ದರು, ಈಗ ಜೆಸಿಬಿಗಳು ಭೂಮಿಯನ್ನು ಅಗೆಯುತ್ತವೆ. ಮನುಷ್ಯರು ತಿಂಗಳುಗಟ್ಟಲೆ ಮಾಡುವ ಕೆಲಸವನ್ನು ದಿನವೊಂದರಲ್ಲೇ ಮಾಡಲು ಸಾಧ್ಯವಾಗಿದೆ. ಇದಕ್ಕೆ ಕಾರಣ ತಂತ್ರಜ್ಞಾನ. ಇದೇ ತಂತ್ರಜ್ಞಾನವೇ ಉದ್ಯಮದ ಸಕ್ಸಸ್ ಮಂತ್ರ. ಉದ್ಯಮಗಳಲ್ಲಿ ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆಯಿಂದ ಕೆಲಸ ಸರಳವಾಗುತ್ತದೆ. ಇದರ ಪ್ರತಿಯಾಗಿ ಉದ್ಯಮವೂ ಹಾಗೆಯೇ ಅಭಿವೃದ್ಧಿ ಸಾಧಿಸುತ್ತದೆ. ಹಾಗೆಯೇ ನಾವೇ ನಿರ್ಮಿಸಿದ ಯಂತ್ರಗಳಿಗೂ ನಮ್ಮದೇ ಅನ್ನುವ ಸ್ವಾಧೀನತೆ ಇದ್ದರೆ ಒಳಿತು. ಇದು ಸ್ಪರ್ಧೆಯನ್ನು ಹೆಚ್ಚಿಸುತ್ತದೆ. ತಯಾರಿಸಿದವನಿಗೆ ಹೊಸ ಗುರುತನ್ನು ನೀಡುತ್ತದೆ ಎಂದು ಡಿಸಿಆರ್‍ನ ಪ್ರಧಾನ ವಿಜ್ಞಾನಿ ಡಾ. ಬಾಲಸುಬ್ರಮಣ್ಯಂ ಹೇಳಿದರು.
ವಿವೇಕಾನಂದರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯುಎಸಿ, ವಿವೇಕಾನಂದ ಸಂಶೋಧನಾ ಕೇಂದ್ರ ಹಾಗೂ ಗೋಡಂಬಿ ಸಂಶೋಧನಾ ನಿರ್ದೇಶನಾಲಯ ಪುತ್ತೂರು ಇದರ ಸಹಯೋಗದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಇವರು ಭೌದ್ದಿಕ ಆಸ್ತಿ ಹಕ್ಕು, ಪೇಟೆಂಟ್ ಮುಂತಾದ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಮಾತನಾಡಿ, ನಮ್ಮ ದೇಶದಲ್ಲಿ ಸಂಶೋಧನೆಗಳನ್ನು ಮಾಡುವವರ ಸಂಖ್ಯೆ ಕಡಿಮೆಯೇ. ಆದರೂ ಮಾಡಿದ ಸಂಶೋಧನೆಗಳಿಗೂ ಮಾನ್ಯತೆ ಪಡೆದುಕೊಳ್ಳದೆ ಅದರ ಹೆಗ್ಗಳಿಕೆಯನ್ನೂ ಬೇರೆಯವರಿಗೆ ನೀಡುತ್ತಿದ್ದೇವೆ. ನಮ್ಮಲ್ಲಿ ಪೇಟೆಂಟ್ ಬಗ್ಗೆ, ಅದನ್ನು ಪಡೆದುಕೊಳ್ಳುವುದರ ಬಗ್ಗೆ ಜ್ಞಾನವೇ ಇಲ್ಲ. ಇದು ಬದಲಾಗಬೇಕು ಎಲ್ಲರಿಗೂ ಇದರ ಬಗ್ಗೆ ತಿಳಿದಾಗ ನಮ್ಮಲ್ಲಿಯೂ ಪೇಟೆಂಟ್‍ಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ, ಸ್ನಾತಕೋತ್ತರ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದ್ವಿತೀಯ ಎಂ.ಕಾಂ ವಿದ್ಯಾರ್ಥಿಗಳಾದ ರಾಹುಲ್ ಸ್ವಾಗತಿಸಿ, ಮೇಘನಾ ರೈ ವಂದಿಸಿದರು, ಪ್ರಥಮ ಎಂ. ಕಾಂ ವಿದ್ಯಾರ್ಥಿ ಪವನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Related News

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”

News
06/03/2026

ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ