ವಿವೇಕಾನಂದ ಫಾರ್ಮಸ್ಯುಟಿಕಲ್ ಕಾಲೇಜಿನ ವಾರ್ಷಿಕೋತ್ಸವ

Leaf
Leaf

ಪುತ್ತೂರು: ಸತತವಾದ ಪ್ರಯತ್ನ ಒಬ್ಬ ವ್ಯಕ್ತಿಯ ಜೀವನದ ಯಶಸ್ವಿಗೆ ಕಾರಣವಾಗುತ್ತದೆ. ವಿದ್ಯಾರ್ಥಿ ಹಂತದಲ್ಲಿ ತಿಳಿದುಕೊಂಡಂತಹ ಎಲ್ಲಾ ವಿಚಾರಗಳನ್ನು ತಮ್ಮ ಬದುಕಿನಲ್ಲಿ ತಪ್ಪದೇ ಅಳವಡಿಸಿಕೊಳ್ಳಬೇಕು. ಔಷಧಿ ಎನ್ನುವುದು ಮಾನವನ ಸುಸ್ಥಿರ ಜೀವನಕ್ಕೆ ಅತ್ಯಗತ್ಯವಾದದ್ದು, ಹಾಗಾಗಿ ಔಷದಿಯ ಸಂಶೋಧನೆಗೆ ಎಂದಿಗೂ ಕೊನೆಯಿರುವುದಿಲ್ಲ.ಅದು ಎಂದೆಂದಿಗೂ ನಿರಂತರವಾದ ಪ್ರಕ್ರಿಯೆ ಎಂದು ಸಿಎನ್ಓಐಸಿ ಲೈಫ್ ಸೈನ್ಸ್ ಇದರ ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಡಾ. ಕೆ.ಸುಬ್ರಮಣ್ಯ ಭಟ್ ತಿಳಿಸಿದರು.

ಇವರು ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್ ಇದರ ವಾರ್ಷಿಕೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ ಪ್ರಭಾಕರ ಭಟ್ ಅವರು ವಿದ್ಯಾರ್ಥಿಗಳು ತಮ್ಮತನವನ್ನು ಬೆಳೆಸಿಕೊಳ್ಳಬೇಕು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಂಶೋಧನೆಯ ಕಡೆಗೆ ಆಸಕ್ತಿ ಬೆಳೆಸುವತ್ತ ಶಿಕ್ಷಕರು ಹೆಚ್ಚು ಒತ್ತನ್ನು ನೀಡಬೇಕು ಹಾಗೂ ಸಂಶೋಧನಾ ಚಟುವಟಿಕೆಗಳು ನಿರಂತರವಾಗಿ ಬೆಳೆಯಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಗುರುರಾಜ. ಎಂ.ಪಿ ಅವರು ವಾರ್ಷಿಕ ವರದಿಯನ್ನು ಮಂಡಿಸಿ ವಿದ್ಯಾರ್ಥಿಗಳು ತಮ್ಮ ಗುರಿ,ಕನಸು ಮತ್ತು ಪ್ರಯತ್ನಡೆಗೆ ಹೆಚ್ಚಿನ ಗಮನ ವಹಿಸಬೇಕು ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ ಎಂ ಕೃಷ್ಣ ಭಟ್, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ ಅಶೋಕ್ ಪ್ರಭು, ಕಾಲೇಜಿನ ಖಜಾಂಜಿ ಮೂಲಚಂದ್ರ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಗತಿ ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ಸಂಚಾಲಕ ಗೋವಿಂದ ಪ್ರಕಾಶ್ ಸಾಯ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಗೌತಮಿ.ಬಿ ವಂದಿಸಿದರು. ಉಪನ್ಯಾಸಕಿಯರಾದ ಪೂರ್ಣಿಮಾ ಕೆ.ಎಸ್ ಮತ್ತು ವಿದ್ಯಾ ಮುರುಗೇಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ