ವೈಟ್ ವಾಟರ್ ರಾಫ್ಟಿಂಗ್ ಶಿಬಿರದಲ್ಲಿ ವಿವೇಕಾನಂದ ಕಾಲೇಜಿನ ಎನ್ ಸಿ ಸಿ ಕೆಡೆಟ್ ಶಾಂತಿಪ್ರಕಾಶ್

Leaf
Leaf

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್ ಸಿಸಿ ವಿದ್ಯಾರ್ಥಿ ಜೆ.ಯು.ಒ ಶಾಂತಿಪ್ರಕಾಶ್ ಅವರು ಅರುಣಾಚಲಪ್ರದೇಶದ ದಿರಂಗ್ ನ ನಿಮಾಸ್( ನೇಷನ್ ಇನ್ಸ್ಟಿಟ್ಯೂಟ್ ಆಫ್ ಮೌಂಟನಿಯರಿಂಗ್ & ಅಡ್ವೆಂಚರ್ ಸ್ಫೋಟ್ರ್ಸ್) ನಲ್ಲಿ ನಡೆದ ರಾಷ್ಟ್ರ ಮಟ್ಟದ ಎನ್ ಸಿ ಸಿ ವೈಟ್ ವಾಟರ್ ರಾಫ್ಟಿಂಗ್ ನಲ್ಲಿ ಭಾಗವಹಿಸಿರುತ್ತಾರೆ.ಇವರಿಗೆ ಭಾಲುಕ್‍ಪುಂಗ್ ನಲ್ಲಿರುವ ಕಮೆಂಗ್ ನದಿಯಲ್ಲಿ ಅಡ್ವೆಂಚರ್ಸ್ ತರಬೇತಿಗಳು ನಡೆದಿದೆ. ಇವರು ಮೂರು ಹಂತದ ಆಯ್ಕೆಯಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ಪ್ರತಿನಿಧಿಸಿದ ಆರು ಜನ ಕೆಡೆಟ್ ಗಳಲ್ಲಿ 19 ಕರ್ನಾಟಕ ಬೆಟಾಲಿಯನ್ ಮಡಿಕೇರಿಯಿಂದ ಭಾಗವಹಿಸಿದವರಲ್ಲಿ ಇವರು ಒಬ್ಬರು.

ಇವರಿಗೆ ಕಾಲೇಜಿನ ಎನ್ ಸಿಸಿ ಅಧಿಕಾರಿ ಲೆ. ಭಾಮಿ ಅತುಲ್ ಶೆಣೈ ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲ ಪೆÇ್ರ.ವಿಷ್ಣು ಗಣಪತಿ ಭಟ್ ಮತ್ತು ಎನ್‍ಸಿಸಿ ಘಟಕ, ಆಡಳಿತ ಮಂಡಳಿ, ಐ ಕ್ಯೂ ಎ ಸಿ ಘಟಕ, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

Leave a Reply

Your email address will not be published. Required fields are marked *

Related News

Events
03/07/2025

ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

News
03/07/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

News
02/07/2025

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ