ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

Leaf
Leaf

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಇಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮವು ಜೂನ್ 30ರಂದು ಕಡಬ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮವನ್ನು ಪುತ್ತೂರಿನ ವಕೀಲರಾದ ಶ್ರೀ ಲತನ್ ರೈ ಗುತ್ತುಪಾಲು ದೀಪ ಬೆಳಗಿಸಿ ಉದ್ಘಾಟಿಸಿ ನಾಯಕತ್ವದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಪ್ರಾಮುಖ್ಯವಾಗಿದೆ. ತಂದೆ-ತಾಯಿಯನ್ನು ಪ್ರೀತಿಸಿ ,ಗೌರವಿಸಿ. ಹಿರಿಯರ ಶಿಕ್ಷಕರ ಮಾತನ್ನು ಕೇಳುವವರ ಜೀವನ ಉತ್ತಮವಾಗಿರುತ್ತದೆ. ದುಶ್ಚಟಗಳಿಂದ ದೂರ ಇರಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಷಯದಲ್ಲಿ ಬಿ.ಇ ಪದವೀಧರರಾಗಿರುವ ಭರತ್.ಕೆ. ಮುಖ್ಯ ಅತಿಥಿಗಳಾಗಿ ಆಗಮಿಸಿ ಈ ಸಂಸ್ಥೆಯಲ್ಲಿ ಆದ ಅನುಭವವನ್ನು ಹಂಚಿಕೊಂಡರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕಿ ಶ್ರೀಮತಿ ಸವಿತಾ ಶಿವ ಸುಬ್ರಮಣ್ಯ ಭಟ್ ವಹಿಸಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಸಂಸ್ಥೆಯ ಕೋಶಾಧಿಕಾರಿ ಶ್ರೀ ಲಿಂಗಪ್ಪ ಜೆ ಹಾಗೂ ಸದಸ್ಯರಾದ ಶ್ರೀ ಶಿವಪ್ರಸಾದ್ ಮೈಲೇರಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ ರೈ ಎಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪೂರ್ವಿತ್ ಸ್ವಾಗತಿಸಿ, ಕುಮಾರಿ ಹರಿಪ್ರಿಯ ಹರಿದಾಸ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಲಕ್ಷ್ಮೀಶ ಗೌಡ ಆರಿಗ ಪ್ರತಿಜ್ಞಾವಿಧಿ ಬೋಧಿಸಿದರು. ಕುಮಾರಿ ರಕ್ಷಾ ಎಂ.ಜೆ.ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Related News

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್