ಭಗೀರಥ ಪಾರಂಪರಿಕ ಕೂಟದ ಉದ್ಘಾಟನೆ

ಇತಿಹಾಸ ಕೇವಲ ಪರೀಕ್ಷೆಗಾಗಿ ಓದುವ ವಿಷಯ ಅಲ್ಲ. ಮಾನವನ ವರ್ತಮಾನ ಸರಿಯಾಗಿರಬೇಕಾದರೆ ಇತಿಹಾಸ ಅಧ್ಯಯನದ ಅಗತ್ಯವಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿಯ ಸಹಪ್ರಾಧ್ಯಾಪಕರಾದ ಸುರೇಶ್ ರೈ.ಕೆ. ತಿಳಿಸಿದರು. ಅವರು ಶ್ರೀರಾಮ ಪದವಿಪೂರ್ವ ವಿದ್ಯಾಲಯ ಕಲ್ಲಡ್ಕ ಇದರ ಭಗೀರಥ ಪಾರಂಪರಿಕ ಕೂಟದ ಉದ್ಘಾಟನೆಯನ್ನು ನೆರವೇರಿಸಿ ಉಪನ್ಯಾಸ ನೀಡಿದರು. ಅವರು ಭಾರತದ ಇತಿಹಾಸವನ್ನು ಪ್ರಸ್ತಾಪಿಸುತ್ತಾ ಭಾರತದ ಬಗ್ಗೆ ಇರುವ ಐತಿಹಾಸಿಕ ಬೆಳವಣಿಗೆಗಳ ಕುರಿತಾಗಿ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀರಾಮ […]