ಶ್ರೀ ಭಾರತಿ ಶಾಲೆ ಆಲಂಕಾರಿನಲ್ಲಿ ಸುದ್ದಿ ಭಾರತಿ ಉದ್ಘಾಟನೆ

ಆಲಂಕಾರು;-ಇಲ್ಲಿನ ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದ್ದಿ -ಭಾರತಿ ಎಂಬ ಪತ್ರಿಕಾಸಂಘ ಸೋಮವಾರಉದ್ಘಾಟನೆಗೊಂಡಿತು. ಕಡಬ ವಲಯ ಪತ್ರಕರ್ತರ ಸಂಘದಅಧ್ಯಕ್ಷಕೆ.ಎಸ್ ಬಾಲಕೃಷ್ಣ ಕೊಲ ದೀಪ ಬೆಳಗಿಸಿ ಸಂಘ ಉದ್ಘಾಟಿಸಿದರು. ನಂತರ ನಡೆದಕಾರ್ಯಕ್ರಮದಲ್ಲಿ ಸುದ್ದಿ ಭಾರತಿ ಸಂಘವನ್ನು ಉದ್ದೇಶಿಸಿ ಮಾತನಾಡಿದರು. ಪತ್ರಿಕೆಗಳು ಸ್ವಾತಂತ್ಯ್ರಕಾಲದಲ್ಲಿ ಹೋರಾಟಗಾರರಿಗೆ ಪ್ರೇರಣೆ ನೀಡುವುದು,ನಾವು ಪತ್ರಿಕೆಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಮತ್ತು ಪತ್ರಿಕೆಯನ್ನು ಮಾರುಕಟ್ಟೆಯಿಂದಕೊಂಡುಓದುವ ಸಂಸ್ಕ್ರತಿ ನಮ್ಮದಾಗಬೇಕುಎಂದರು. ಜ್ಞಾನದದಾಹ ನಮ್ಮಲ್ಲಿರಬೇಕು.ಸಾಹಿತ್ಯದ ಬರವಣಿಗೆಗೆ ಪುಸ್ತಕ ಓದಬೇಕು. ಪುಸ್ತಕ ಓದದೆ ವರದಿ ಮಾಡಲು ಸಾಧ್ಯವಿಲ್ಲ ಎಂದುಅಭಿಪ್ರಾಯವ್ಯಕ್ತ ಪಡಿಸಿದರು.ನಂತರ ಸುದ್ದಿ ಭಾರತಿ […]