ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಜಿತ್‌ಗೆ ಸನ್ಮಾನ

Leaf
Leaf

ಜನವರಿ 26ರಂದು ನವದೆಹಲಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಪ್ರಧಾನಮಂತ್ರಿಗಳ ಪಥಸಂಚಲನದಲ್ಲಿ ಭಾಗವಹಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ವಿವೇಕಾನಂದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎನ್.ಸಿ.ಸಿ ಕೆಡೆಟ್‌ JUO ಸುಜಿತ್‌ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಇವರು 4/19 KAR BN NCC MADIKERI̧ KARNATAKA & GOA DIRECTORATE ನ್ನು ಪ್ರತಿನಿಧಿಸಿ ಪಥಸಂಚಲನಕ್ಕೆ ಆಯ್ಕೆಯಾಗಿದ್ದರು. ಕಡಬ ತಾಲೂಕಿನ ರುಕ್ಮಯ್ಯ ಗೌಡ ಹಾಗೂ ಗೀತಾ ದಂಪತಿಗಳ ಪುತ್ರರಾಗಿರುವ ಇವರು ತಮ್ಮ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೂರೈಸಿರುತ್ತಾರೆ. ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ, ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಸನ್ಮಾನಿಸಿ, ಅಭಿನಂದಿಸಿರುತ್ತಾರೆ.

Leave a Reply

Your email address will not be published. Required fields are marked *

Related News

Events
03/07/2025

ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

News
03/07/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

News
02/07/2025

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ