ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “Carrier selection and building”ವಿಷಯದಲ್ಲಿ ಮಾಹಿತಿ ಕಾರ‍್ಯಗಾರ

Leaf
Leaf

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಆಟೋಮೊಬೈಲ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ “Carrier selection and building” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬಂದ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಯು ಆದ ಶಿವಕಿರಣ್ ಇವರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಅವರಿಗಿರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಮುರಳೀಧರ್ ಯಸ್ ಇವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ವಿಷ್ಣುಮೂರ್ತಿ ಎಚ್, ಆಟೋ ಮೊಬೈಲ್ ವಿಭಾಗ ಮುಖ್ಯಸ್ಥ ಶಿವಶಂಕರ್ ಪಿ ಕೋರೆ, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಟೋ ಮೊಬೈಲ್ ವಿಭಾಗದ ಉಪನ್ಯಾಸಕ ವಿನ್ಯಾಸ್ ಪಿ.ಕೆ ಅತಿಥಿಗಳನ್ನು ಸ್ವಾಗತಿಸಿದರು. ಹಾಗೂ ದ್ವಿತೀಯ ಆಟೋ ಮೊಬೈಲ್ ವಿದ್ಯಾರ್ಥಿ ಬ್ರಿಜೇಶ್ ವಂದಿಸಿದರು.

Leave a Reply

Your email address will not be published. Required fields are marked *

Related News

News
20/02/2026

ವಿವೇಕಾನಂದ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕ- ರಾಷ್ಟ್ರೀಯ ವಿಚಾರ ಸಂಕಿರಣ

News and Events
16/02/2026

ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ

News, News and Events
16/02/2026