• 08251 236599
  • 08251 236444
  • vvsputtur@gmail.com

ದೇಸೀ ಕೇಂದ್ರಿತ ವಿಚಾರಗಳು ಭಾರತದಲ್ಲಿ ಬೆಳೆಯಲಾರಂಭಿಸಿವೆ:  ನಾಗಾಲ್ಯಾಂಡ್ ರಾಜ್ಯಪಾಲ ಪದ್ಮನಾಭ ಆಚಾರ್ಯ

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಪುತ್ತೂರು: ನಮ್ಮ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಿಂದ ಹೊರಬರುವಾಗ ಉದ್ಯೋಗ ಹುಡುಕುವವರಾಗಿರಬಾರದು. ಬದಲಾಗಿ ಉದ್ಯೋಗದಾತರಾಗಿ ಕಾಣಿಸಿಕೊಳ್ಳಬೇಕು. ನಮ್ಮ ದೇಶದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒದಗಿಸುತ್ತಿವೆಯಾದರೂ ನಮ್ಮಲ್ಲಿನ ಉತ್ಕೃಷ್ಟತೆಯನ್ನು ಅರಿಯುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಲು ಸಾಧ್ಯವಾಗುತ್ತಿಲ್ಲ. ಆದರೆ ಇತ್ತೀಚೆಗಿನ ದಿನಗಳಲ್ಲಿ ಭಾರತ ಕೇಂದ್ರಿತವಾದ ವಿಚಾರಧಾರೆಗಳು ಬೆಳೆಯಲಾರಂಭಿಸಿವೆ. ಮೇಕ್ ಇನ್ ಇಂಡಿಯ ಕಲ್ಪನೆಗಳು ಭಾರತವನ್ನು ಬಲಿಷ್ಟಗೊಳಿಸಲಾರಂಭಿಸಿವೆ. ನಮ್ಮ ಸ್ಥಳೀಯ ಪ್ರದೇಶಗಳ ಅಭಿವೃದ್ಧಿಗಾಗಿ ಶ್ರಮಿಸುವುದರ ಮುಖೇನ ಅಂತಿಮವಾಗಿ ರಾಷ್ಟ್ರ ನಿರ್ಮಾಣದ ಕಾಯಕದಲ್ಲಿ

Read More

ಗ್ರಾಮ ವಿಕಾಸ ಸಮಾಲೋಚನೆ ಕಾರ್ಯಕ್ರಮ

ವಿದ್ಯಾರ್ಥಿಗಳಿಂದ ಗ್ರಾಮ ವಿಕಾಸ : ಗುರುರಾಜ್ ಪುತ್ತೂರು: ವಿದ್ಯಾರ್ಥಿಗಳ ಮೂಲಕ ಗ್ರಾಮವಿಕಾಸ ಮಾಡುವ ಕಾರ್ಯ ಉತ್ತಮವಾದ ವಿಚಾರ. ಪ್ರತಿ ಗ್ರಾಮ ಶಿಕ್ಷಣ, ಸಂಸ್ಕೃತಿಯ ವಿಚಾರದಲ್ಲಿ ಸ್ವಾವಲಂಬನೆಯನ್ನು ಹೊಂದಬೇಕು. ಸಾಮಾಜಿಕ ಸುರಕ್ಷೆ ಸಾಮರಸ್ಯವನ್ನು ಹುಟ್ಟಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ, ಗ್ರಾಮವಿಕಾಸದ ಪ್ರಾಂತ್ ಪ್ರಮುಖ್ ಗುರುರಾಜ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವೇಕಾನಂದ ಜಯಂತಿಯ ಪ್ರಯುಕ್ತ ಆಯೋಜಿಸಲಾದ ಗ್ರಾಮ ವಿಕಾಸ ಸಮಾಲೋಚನೆ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಶುಕ್ರವಾರ ಮಾತನಾಡಿದರು. ಗ್ರಾಮ ಆಧುನೀಕತೆಯ

Read More

Inauguration of Water Harvesting

On 27-7-2017 Inauguration of Water Harvesting at Vivekananda Campus by Dr. K. Prabhakar Bhat, President, Vivekananda Vidyavardhaka Sangha Puttur (R).

Read More

ಕೆಲಸದ ಗುಣಮಟ್ಟ ಹೆಚ್ಚಿಸಲು ಕಾರ್ಯಾಗಾರ ಪೂರಕ: ಡಾ. ಕೃಷ್ಣ ಭಟ್

ಪುತ್ತೂರು: ಕಾಲೇಜುಗಳ ಕಛೇರಿಗಳಲ್ಲಿ ಕಾರ್ಯನಿರ್ವಹಿಸುವ ಕಛೇರಿ ಸಹಾಯಕರು, ಅಟೆಂಡರ್‍ಸ್‌ಗಳೂ ಕೂಡ ಸಂಸ್ಥೆಯ ಆಧಾರಸ್ಥಂಭಗಳು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ನುಡಿದರು. ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಶಿಕ್ಷಣ ಘಟಕದಿಂದ ಸಂಸ್ಥೆಯ ಕಚೇರಿ ಸಹಾಯಕರು ಮತ್ತು ಅಟೆಂಡರ್‍ಸ್‌ಗಳಿಗೆ ನಡೆಸಿದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿ ಹಂತದಲ್ಲೂ ತಮ್ಮ ಕೆಲಸದ ಗುಣ ಮಟ್ಟವನ್ನು ಹೆಚ್ಚಿಸಲು ಮತ್ತು ನಿರಂತರವಾಗಿ ಕಾರ್ಯದ ಹೊಸ ಅನ್ವೇಷಣೆಗಾಗಿ ಇಂತಹ ಕಾರ್ಯಾಗಾರಗಳು ಉಪಯುಕ್ತ ಎಂದು ಹೇಳಿದರು. ಅಧ್ಯಕ್ಷತೆಯನ್ನು ವಹಿಸಿದ್ದ ನಿವೃತ್ತ ಪ್ರಾಚಾರ್ಯ

Read More

ಅಮೋಘ ಯಶಸ್ಸನ್ನು ದಾಖಲಿಸಿದ ಪುತ್ತೂರಿನ ವಿವೇಕ ಉದ್ಯೋಗ ಮೇಳ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಬೃಹತ್ ವಿವೇಕ ಉದ್ಯೋಗ ಮೇಳ – 2017 ಅಮೋಘ ಯಶಸ್ಸನ್ನು ದಾಖಲಿಸಿದೆ. ಆನ್ ಲೈನ್ ಹಾಗೂ ಆಫ್ ಲೈನ್ ನಲ್ಲಿ ಒಟ್ಟಾಗಿ 15,112 ಮಂದಿ ಈ ಉದ್ಯೋಗ ಮೇಳಕ್ಕಾಗಿ ತಮ್ಮನ್ನು ನೋಂದಾವಣೆ ಮಾಡಿಕೊಂಡಿದ್ದರು. ಅವರಲ್ಲಿ 10,020 ಮಂದಿ ಇಂದು ನಡೆದ ಸಂದರ್ಶನಕ್ಕೆ ಆಗಮಿಸಿದ್ದರು. ತಾಂತ್ರಿಕ, ತಾಂತ್ರಿಕೇತರ ಹಾಗೂ ಇತರ ಎಂಬ ಮೂರು ವರ್ಗಗಳಲ್ಲಿ ಸಂದರ್ಶನ ನಡೆಸಲಾಯಿತು. ಈ ಮೂರೂ ವಿಭಾಗಗಳನ್ನು ಒಳಗೊಂಡು ಒಟ್ಟು 3232 ಮಂದಿಯನ್ನು ಶಾರ್ಟ್‌ಲಿಸ್ಟ್ ಮಾಡಲಾಗಿರುವುದು ಈ ಉದ್ಯೋಗ ಮೇಳದ

Read More

ಕೌಶಲ್ಯಾಭಿವೃದ್ಧಿ ಒಂದು ರಾಷ್ಟ್ರೀಯ ಆಂದೋಲನ: ರಾಜೀವ್ ಪ್ರತಾಪ್ ರೂಢಿ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ನೆಹರು ನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿ ಆಯೋಜಿಸಿದ ಬೃಹತ್ ಉದ್ಯೋಗ ಮೇಳದ ಉದ್ಘಾಟನೆಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವ ರಾಜೀವ್ ಪ್ರತಾಪ್ ರೂಢಿಯವರನ್ನು ಆಹ್ವಾನಿಸಲಾಗಿತ್ತು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಸಂಜೆ ಸಚಿವ ಸಂಪುಟ ಸಭೆ ಕರೆದಿರುವ ಹಿನ್ನಲೆಯಲ್ಲಿ ಅವರಿಗೆ ಉದ್ಯೋಗ ಮೇಳಕ್ಕೆ ಬರಲಾಗಿರಲಿಲ್ಲ. ಆದರೆ ಸ್ಕೈಪ್ ಮೂಲಕ ಉದ್ಯೋಗ ಮೇಳಕ್ಕೆ ಆಗಮಿಸಿದ್ದ ನೆರೆದವರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ದೇಶದಲ್ಲಿ ಕಂಪ್ಯೂಟರ್‌ಗಳು ಬರಲಾರಂಭಿಸಿದ ಹೊತ್ತಿಗೆ ಅವು ಉದ್ಯೋಗಗಳನ್ನು

Read More

ವಿವೇಕ ಉದ್ಯೋಗ ಮೇಳದಲ್ಲಿ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ

ದೇಶದ ಒಳಿತಿಗಾಗಿ ಉದ್ಯೋಗ ಸೃಷ್ಟಿಯಾಗಬೇಕು: ಬಿ.ಎಸ್.ಶ್ರೀನಿವಾಸನ್ ಪುತ್ತೂರು: ಭಾರತವು ಇಂದು ಯುವಜನರನ್ನು ಅವಲಂಭಿಸಿಕೊಂಡಿದೆ. ನಮ್ಮಲ್ಲಿ ಉದ್ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸತನದ ಕೊರತೆ ಇದು ಹೀಗೆಯೇ ಮುಂದುವರಿದರೆ ಇದ್ದು ಮುಂದಿನ ವರ್ಷಗಳಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗಬಹುದು. ದೇಶದ ಒಳಿತಿಗಾಗಿ ಉದ್ಯೋಗದ ಸೃಷ್ಟಿಯಾಗಬೇಕಾಗಿದೆ ಎಂದು ಲಘು ಉದ್ಯೋಗ ಭಾರತೀಯ ಉಪಾಧ್ಯಕ್ಷ ಬಿ ಎಸ್ ಶ್ರೀನಿವಾಸನ್ ಹೇಳಿದರು. ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಶುಕ್ರವಾರ ವಿವೇಕಾನಂದ ಕ್ಯಾಂಪಸ್‌ನಲ್ಲಿ ಆಯೋಜಿಸಲಾದ ಬೃಹತ್ ಉದ್ಯೋಗ ಮೇಳದ ಸಂದರ್ಭದಲ್ಲಿ ನಡೆದ ಸ್ವ ಉದ್ಯೋಗ ಮಾಹಿತಿ

Read More

Highslide for Wordpress Plugin