ಆರೋಗ್ಯ ನಿಧಿ ಹಸ್ತಾಂತರ

Leaf
Leaf

ಉಪ್ಪಿನಂಗಡಿ :ಸಂಕಷ್ಠದಲ್ಲಿರುವವರಿಗೆ ಸಹಾಯ ಸಹಕಾರ ನೀಡಿ ಸ್ಪಂದಿಸುವುದೇ ಮಾನವ ಜೀವನದ ಆದರ್ಶ ನಡೆಯಾಗಿದ್ದು, ಇದು ಭಗವಂತನ ಕೃಪೆಗೆ ಒಳಗಾಗುವ ಕಾರ್ಯವೂ ಹೌದುಎಂದು ಶ್ರೀ ಮಾಧವ ಶಿಶು ಮಂದಿರದ ಗೌರವಾಧ್ಯಕ್ಷ ಯು ರಾಮ ತಿಳಿಸಿದರು.


ಅವರು ಇತ್ತೀಚೆಗೆ ಅಪಘಾತದಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಉಪ್ಪಿನಂಗಡಿಯ ಶ್ರೀ ರಾಮ ಶಾಲಾ ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಮಾಧವ ಶಿಶು ಮಂದಿರದ ವತಿಯಿಂದ ನೀಡಲಾದ 25 ಸಾವಿರ ರೂಪಾಯಿಯ ಆರೋಗ್ಯ ನಿಧಿಯನ್ನು ಶ್ರೀ ರಾಮ ಶಾಲಾ ಸಂಚಾಲಕ ಯು ಜಿ ರಾಧರವರಿಗೆ ಅಕ್ಟೋಬರ್ 14 ರಂದು ಹಸ್ತಾಂತರಿಸಿ ಮಾತನಾಡುತ್ತಿದ್ದರು.

ಆರೋಗ್ಯ ನಿಧಿ ಹಸ್ತಾಂತರ ಕಾರ್ಯಕ್ರಮದಲ್ಲಿ ಶ್ರೀ ಮಾಧವ ಶಿಶು ಮಂದಿರದ ಅಧ್ಯಕ್ಷ ಮನೋಜ್ ಶೆಟ್ಟಿ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ, ಶಿಶು ಮಂದಿರದ ಪೋಷಕರಾದ ಮೋಹನ್ ಭಟ್, ಹೆಚ್ ಸುಬ್ರಹ್ಮಣ್ಯ ಶೆಣೈ, ಶಿಶು ಮಂದಿರದ ಮಾತಾಜಿ ಪುಷ್ಪಲತಾ ಎಸ್, ಹಾಗೂ ಚಂದ್ರಾವತಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Related News

Events
03/07/2025

ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

News
03/07/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

News
02/07/2025

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ