ಆರೋಗ್ಯ ನಿಧಿ ಹಸ್ತಾಂತರ

Leaf
Leaf

ಉಪ್ಪಿನಂಗಡಿ :ಸಂಕಷ್ಠದಲ್ಲಿರುವವರಿಗೆ ಸಹಾಯ ಸಹಕಾರ ನೀಡಿ ಸ್ಪಂದಿಸುವುದೇ ಮಾನವ ಜೀವನದ ಆದರ್ಶ ನಡೆಯಾಗಿದ್ದು, ಇದು ಭಗವಂತನ ಕೃಪೆಗೆ ಒಳಗಾಗುವ ಕಾರ್ಯವೂ ಹೌದುಎಂದು ಶ್ರೀ ಮಾಧವ ಶಿಶು ಮಂದಿರದ ಗೌರವಾಧ್ಯಕ್ಷ ಯು ರಾಮ ತಿಳಿಸಿದರು.


ಅವರು ಇತ್ತೀಚೆಗೆ ಅಪಘಾತದಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಉಪ್ಪಿನಂಗಡಿಯ ಶ್ರೀ ರಾಮ ಶಾಲಾ ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಮಾಧವ ಶಿಶು ಮಂದಿರದ ವತಿಯಿಂದ ನೀಡಲಾದ 25 ಸಾವಿರ ರೂಪಾಯಿಯ ಆರೋಗ್ಯ ನಿಧಿಯನ್ನು ಶ್ರೀ ರಾಮ ಶಾಲಾ ಸಂಚಾಲಕ ಯು ಜಿ ರಾಧರವರಿಗೆ ಅಕ್ಟೋಬರ್ 14 ರಂದು ಹಸ್ತಾಂತರಿಸಿ ಮಾತನಾಡುತ್ತಿದ್ದರು.

ಆರೋಗ್ಯ ನಿಧಿ ಹಸ್ತಾಂತರ ಕಾರ್ಯಕ್ರಮದಲ್ಲಿ ಶ್ರೀ ಮಾಧವ ಶಿಶು ಮಂದಿರದ ಅಧ್ಯಕ್ಷ ಮನೋಜ್ ಶೆಟ್ಟಿ, ಉಪ್ಪಿನಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ, ಶಿಶು ಮಂದಿರದ ಪೋಷಕರಾದ ಮೋಹನ್ ಭಟ್, ಹೆಚ್ ಸುಬ್ರಹ್ಮಣ್ಯ ಶೆಣೈ, ಶಿಶು ಮಂದಿರದ ಮಾತಾಜಿ ಪುಷ್ಪಲತಾ ಎಸ್, ಹಾಗೂ ಚಂದ್ರಾವತಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Related News

News
18/08/2026

80 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ- ಧ್ವಜಾರೋಹಣ

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ