ರಾಷ್ಟ್ರೀಯ ಶಿಕ್ಷಣ ನೀತಿ 2020 – ಮಾಹಿತಿ ಕಾರ್ಯಾಗಾರ

ನೀತಿಯನ್ನು ಹೆಮ್ಮೆ ಮತ್ತು ಗರ್ವದಿಂದ ಸ್ವೀಕರಿಸಲು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ. ಎಸ್. ಯಡಪಡಿತ್ತಾಯ ಕರೆ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತರುತ್ತಿರುವ “ರಾಷ್ಟ್ರೀಯ ಶಿಕ್ಷಣ ನೀತಿ – 2020” ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ವಿದ್ಯಾ ಭಾರತಿ ಸಹಯೋಗದೊಂದಿಗೆ ಸೆಪ್ಟೆಂಬರ್ 26 ರಂದು ವಿವೇಕಾನಂದ ಪದವಿ ಕಾಲೇಜಿನ ಸುವರ್ಣಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. […]

ನರೇಂದ್ರ ಪದವಿ ಪೂರ್ವ ಕಾಲೇಜು: ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

ನರೇಂದ್ರ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಉದ್ದೇಶಿತ ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ದಿನಾಂಕ 17/02/2018 ಬೆಳಗ್ಗೆ ಸಮಯ 8.30 ಕ್ಕೆ ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟವರು ಶ್ರೀ ಅನಂತಕುಮಾರ್ ಹೆಗಡೆ, ಕೌಶಲ್ಯ ಅಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವರು ಭಾರತ ಸರಕಾರ. ತದ ನಂತರ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ದ ಅಧ್ಯಕ್ಷರಾಗಿರುವ ಶ್ರೀಯುತ ಡಾ| ಪ್ರಭಾಕರ ಭಟ್ ವಹಿಸಿದ್ದರು. […]

ದೇಸೀ ಕೇಂದ್ರಿತ ವಿಚಾರಗಳು ಭಾರತದಲ್ಲಿ ಬೆಳೆಯಲಾರಂಭಿಸಿವೆ:  ನಾಗಾಲ್ಯಾಂಡ್ ರಾಜ್ಯಪಾಲ ಪದ್ಮನಾಭ ಆಚಾರ್ಯ

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಪುತ್ತೂರು: ನಮ್ಮ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಿಂದ ಹೊರಬರುವಾಗ ಉದ್ಯೋಗ ಹುಡುಕುವವರಾಗಿರಬಾರದು. ಬದಲಾಗಿ ಉದ್ಯೋಗದಾತರಾಗಿ ಕಾಣಿಸಿಕೊಳ್ಳಬೇಕು. ನಮ್ಮ ದೇಶದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳು ಶಿಕ್ಷಣವನ್ನು ಒದಗಿಸುತ್ತಿವೆಯಾದರೂ ನಮ್ಮಲ್ಲಿನ ಉತ್ಕೃಷ್ಟತೆಯನ್ನು ಅರಿಯುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸಲು ಸಾಧ್ಯವಾಗುತ್ತಿಲ್ಲ. ಆದರೆ ಇತ್ತೀಚೆಗಿನ ದಿನಗಳಲ್ಲಿ ಭಾರತ ಕೇಂದ್ರಿತವಾದ ವಿಚಾರಧಾರೆಗಳು ಬೆಳೆಯಲಾರಂಭಿಸಿವೆ. ಮೇಕ್ ಇನ್ ಇಂಡಿಯ ಕಲ್ಪನೆಗಳು ಭಾರತವನ್ನು ಬಲಿಷ್ಟಗೊಳಿಸಲಾರಂಭಿಸಿವೆ. ನಮ್ಮ ಸ್ಥಳೀಯ ಪ್ರದೇಶಗಳ ಅಭಿವೃದ್ಧಿಗಾಗಿ ಶ್ರಮಿಸುವುದರ ಮುಖೇನ ಅಂತಿಮವಾಗಿ ರಾಷ್ಟ್ರ ನಿರ್ಮಾಣದ ಕಾಯಕದಲ್ಲಿ […]

ಗ್ರಾಮ ವಿಕಾಸ ಸಮಾಲೋಚನೆ ಕಾರ್ಯಕ್ರಮ

ವಿದ್ಯಾರ್ಥಿಗಳಿಂದ ಗ್ರಾಮ ವಿಕಾಸ : ಗುರುರಾಜ್ ಪುತ್ತೂರು: ವಿದ್ಯಾರ್ಥಿಗಳ ಮೂಲಕ ಗ್ರಾಮವಿಕಾಸ ಮಾಡುವ ಕಾರ್ಯ ಉತ್ತಮವಾದ ವಿಚಾರ. ಪ್ರತಿ ಗ್ರಾಮ ಶಿಕ್ಷಣ, ಸಂಸ್ಕೃತಿಯ ವಿಚಾರದಲ್ಲಿ ಸ್ವಾವಲಂಬನೆಯನ್ನು ಹೊಂದಬೇಕು. ಸಾಮಾಜಿಕ ಸುರಕ್ಷೆ ಸಾಮರಸ್ಯವನ್ನು ಹುಟ್ಟಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ, ಗ್ರಾಮವಿಕಾಸದ ಪ್ರಾಂತ್ ಪ್ರಮುಖ್ ಗುರುರಾಜ್ ಹೇಳಿದರು. ಅವರು ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವೇಕಾನಂದ ಜಯಂತಿಯ ಪ್ರಯುಕ್ತ ಆಯೋಜಿಸಲಾದ ಗ್ರಾಮ ವಿಕಾಸ ಸಮಾಲೋಚನೆ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಶುಕ್ರವಾರ ಮಾತನಾಡಿದರು. ಗ್ರಾಮ ಆಧುನೀಕತೆಯ […]

Inauguration of Water Harvesting

On 27-7-2017 Inauguration of Water Harvesting at Vivekananda Campus by Dr. K. Prabhakar Bhat, President, Vivekananda Vidyavardhaka Sangha Puttur (R).

ಕೆಲಸದ ಗುಣಮಟ್ಟ ಹೆಚ್ಚಿಸಲು ಕಾರ್ಯಾಗಾರ ಪೂರಕ: ಡಾ. ಕೃಷ್ಣ ಭಟ್

ಪುತ್ತೂರು: ಕಾಲೇಜುಗಳ ಕಛೇರಿಗಳಲ್ಲಿ ಕಾರ್ಯನಿರ್ವಹಿಸುವ ಕಛೇರಿ ಸಹಾಯಕರು, ಅಟೆಂಡರ್‍ಸ್‌ಗಳೂ ಕೂಡ ಸಂಸ್ಥೆಯ ಆಧಾರಸ್ಥಂಭಗಳು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್ ನುಡಿದರು. ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಶಿಕ್ಷಣ ಘಟಕದಿಂದ ಸಂಸ್ಥೆಯ ಕಚೇರಿ ಸಹಾಯಕರು ಮತ್ತು ಅಟೆಂಡರ್‍ಸ್‌ಗಳಿಗೆ ನಡೆಸಿದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿ ಹಂತದಲ್ಲೂ ತಮ್ಮ ಕೆಲಸದ ಗುಣ ಮಟ್ಟವನ್ನು ಹೆಚ್ಚಿಸಲು ಮತ್ತು ನಿರಂತರವಾಗಿ ಕಾರ್ಯದ ಹೊಸ ಅನ್ವೇಷಣೆಗಾಗಿ ಇಂತಹ ಕಾರ್ಯಾಗಾರಗಳು ಉಪಯುಕ್ತ ಎಂದು ಹೇಳಿದರು. ಅಧ್ಯಕ್ಷತೆಯನ್ನು ವಹಿಸಿದ್ದ ನಿವೃತ್ತ ಪ್ರಾಚಾರ್ಯ […]

ಅಮೋಘ ಯಶಸ್ಸನ್ನು ದಾಖಲಿಸಿದ ಪುತ್ತೂರಿನ ವಿವೇಕ ಉದ್ಯೋಗ ಮೇಳ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಬೃಹತ್ ವಿವೇಕ ಉದ್ಯೋಗ ಮೇಳ – 2017 ಅಮೋಘ ಯಶಸ್ಸನ್ನು ದಾಖಲಿಸಿದೆ. ಆನ್ ಲೈನ್ ಹಾಗೂ ಆಫ್ ಲೈನ್ ನಲ್ಲಿ ಒಟ್ಟಾಗಿ 15,112 ಮಂದಿ ಈ ಉದ್ಯೋಗ ಮೇಳಕ್ಕಾಗಿ ತಮ್ಮನ್ನು ನೋಂದಾವಣೆ ಮಾಡಿಕೊಂಡಿದ್ದರು. ಅವರಲ್ಲಿ 10,020 ಮಂದಿ ಇಂದು ನಡೆದ ಸಂದರ್ಶನಕ್ಕೆ ಆಗಮಿಸಿದ್ದರು. ತಾಂತ್ರಿಕ, ತಾಂತ್ರಿಕೇತರ ಹಾಗೂ ಇತರ ಎಂಬ ಮೂರು ವರ್ಗಗಳಲ್ಲಿ ಸಂದರ್ಶನ ನಡೆಸಲಾಯಿತು. ಈ ಮೂರೂ ವಿಭಾಗಗಳನ್ನು ಒಳಗೊಂಡು ಒಟ್ಟು 3232 ಮಂದಿಯನ್ನು ಶಾರ್ಟ್‌ಲಿಸ್ಟ್ ಮಾಡಲಾಗಿರುವುದು ಈ ಉದ್ಯೋಗ ಮೇಳದ […]

ಕೌಶಲ್ಯಾಭಿವೃದ್ಧಿ ಒಂದು ರಾಷ್ಟ್ರೀಯ ಆಂದೋಲನ: ರಾಜೀವ್ ಪ್ರತಾಪ್ ರೂಢಿ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ನೆಹರು ನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿ ಆಯೋಜಿಸಿದ ಬೃಹತ್ ಉದ್ಯೋಗ ಮೇಳದ ಉದ್ಘಾಟನೆಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವ ರಾಜೀವ್ ಪ್ರತಾಪ್ ರೂಢಿಯವರನ್ನು ಆಹ್ವಾನಿಸಲಾಗಿತ್ತು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಸಂಜೆ ಸಚಿವ ಸಂಪುಟ ಸಭೆ ಕರೆದಿರುವ ಹಿನ್ನಲೆಯಲ್ಲಿ ಅವರಿಗೆ ಉದ್ಯೋಗ ಮೇಳಕ್ಕೆ ಬರಲಾಗಿರಲಿಲ್ಲ. ಆದರೆ ಸ್ಕೈಪ್ ಮೂಲಕ ಉದ್ಯೋಗ ಮೇಳಕ್ಕೆ ಆಗಮಿಸಿದ್ದ ನೆರೆದವರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ದೇಶದಲ್ಲಿ ಕಂಪ್ಯೂಟರ್‌ಗಳು ಬರಲಾರಂಭಿಸಿದ ಹೊತ್ತಿಗೆ ಅವು ಉದ್ಯೋಗಗಳನ್ನು […]