ಕಡಬ: 26ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ

ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಜಂಟಿಯಾಗಿ 26ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮವನ್ನು ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ಜುಲೈ 28ರಂದು ನಡೆಸಲಾಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ವಿದ್ಯಾಲಯ ಕನ್ನಡ ಮಾಧ್ಯಮದ ಆಡಳಿತ ಮಂಡಳಿ ಸದಸ್ಯರು, ಪ್ರೌಢ ವಿಭಾಗದ ಮೇಲ್ವಿಚಾರಕರು ಆಗಿರುವ ಶ್ರೀಮತಿ ಪುಲಸ್ತ್ಯ ರೈ ವಹಿಸಿ ಸೈನಿಕರಲ್ಲಿರುವ ಕೆಚ್ಚೆದೆ ಅವರನ್ನು ಗಡಿಯಲ್ಲಿ ಬದುಕಿಸುತ್ತದೆ ಇಂತಹ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ದೇಶ ಸೇವೆಯ ಭಾವನೆಯನ್ನು ಬೆಳಿಸಿಕೊಳುವಂತಾಗಬೇಕು ಎಂದು ಅಧ್ಯಕ್ಷೀಯ […]
ವಿವೇಕಾನಂದ ಕಾಲೇಜಿನಲ್ಲಿ ಡಾ.ಕೃಷ್ಣ ಕಾರಂತ ಅವರಿಗೆ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ವೃತ್ತಿ ಬದುಕಿನಲ್ಲಿ ಖುಷಿಯ ಕ್ಷಣಗಳು ನಮ್ಮದಾಗಬೇಕು. ಈ ಹಂತದಲ್ಲಿ ಎದುರಾಗುವ ಸಮಸ್ಯೆಗಳನ್ನು ನಿಭಾಯಿಸುತ್ತಾ ಮುಂದೆ ಸಾಗುವುದು ಅತೀ ಮುಖ್ಯ ಬದುಕಿನ ಏರಿಳಿತಗಳು ಹಲವಾರು ಅನುಭವಗಳನ್ನು ತಿಳಿಸಿಕೊಡುತ್ತದೆ. ಕಾರಂತರ ನಿವೃತ್ತ ಜೀವನದಲ್ಲಿ ಶ್ರೇಯಸ್ಸಾಗಲಿ ” ಎಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ನುಡಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ ) ಇಲ್ಲಿ ಅಧ್ಯಾಪಕರ ಸಂಘ ಹಾಗೂ ಅಧ್ಯಾಪಕೇತರರ ಸಂಘದ ಸಹಯೋಗದಲ್ಲಿ ನಡೆದ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಕಾರಂತ್ ಅವರ […]
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

ಪುತ್ತೂರು : ಪುತ್ತೂರಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ನೀಡುವ ಗುರಿಯನ್ನು ಇರಿಸಿಕೊಂಡು 1986ರಲ್ಲಿ ಸ್ಥಾಪನೆಗೊಂಡ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಹೆಮ್ಮೆಯ ಅಂಗಸಂಸ್ಥೆಯಾಗಿದೆ. ಈ ಸಂಸ್ಥೆಯ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಕಾರಣೀಭೂತರಾದ ಹಿರಿಯರಾದ ಉರಿಮಜಲು ಕೆ. ರಾಮ ಭಟ್ಟರ ಸವಿನೆನಪಿಗಾಗಿ 2025 ನೇ ಜುಲೈ 2ರಂದು ಕಾಲೇಜಿನಲ್ಲಿ ನವೀಕೃತ ಉರಿಮಜಲು ಕೆ. ರಾಮ ಭಟ್ ಸಭಾಂಗಣದ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ಜೊತೆಯಲ್ಲಿ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವವನ್ನು ಕೂಡ […]
ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2024-25ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ಗಳನ್ನು ಪಡೆದು ದಾಖಲೆಯನ್ನು ನಿರ್ಮಿಸಿದ್ದಾರೆ.ಕಾಲೇಜಿನ ಡಾಟಾ ಸೈನ್ಸ್ ವಿಭಾಗಕ್ಕೆ 4, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗಕ್ಕೆ 2 ಮತ್ತು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗಕ್ಕೆ ಒಂದು ರ್ಯಾಂಕ್ ಲಭಿಸಿರುತ್ತದೆ.4 ವರ್ಷಗಳ ಕೆಳಗೆ ನೂತನವಾಗಿ ಆರಂಭವಾದ ಡಾಟಾ ಸೈನ್ಸ್ ವಿಭಾಗದ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳು […]
ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳÀ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು 100% ಫಲಿತಾಂಶದೊಂದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಇದೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-100%, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ […]
ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್ ನಿವೃತ್ತಿ

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಪ್ರೊ.ವಿಷ್ಣು ಗಣಪತಿ ಭಟ್ ಮೇ 31, 2025ರಂದು ಸೇವೆಯಿಂದ ನಿವೃತ್ತಿಗೊಳ್ಳುತ್ತಿದ್ದಾರೆ. ಇವರು ಮೂಲತಃ ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮದವರಾಗಿದ್ದು ಗಣಪತಿ ಪರಮೇಶ್ವರ ಭಟ್ಟ ಹಾಗೂ ಪಾರ್ವತಿ ಇವರ ಪುತ್ರ. ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕರ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಿಕ್ಷಣ ಶ್ರೀ ಚನ್ನಕೇಶವ ಹೈಸ್ಕೂಲ್ ಇಲ್ಲಿ ಮುಗಿಸಿ ಹೊನ್ನಾವರ ಎಸ್ ಡಿ ಎಮ್ ಕಾಲೇಜ್ […]
ನಿಮ್ಮ ಗುರಿಯೇ ಸಕ್ಸಸ್ ಬೂಸ್ಟರ್: ಪ್ರೊ. ಶ್ರೀಪತಿ ಕಲ್ಲೂರಾಯ

ಪುತ್ತೂರು: ನಮ್ಮ ದೇಶದಲ್ಲಿ ಜ್ಞಾನ ಸಂಪಾದನೆಯಲ್ಲಿ ತೊಡಗಿದ್ದಾರೆಯೇ ಹೊರತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಲ್ಲಿ ಎಡವುತ್ತಿದ್ದಾರೆ. ನಿಮ್ಮ ಕೌಶಲ್ಯವನ್ನು ದೇಶದ ಅಭಿವೃದ್ಧಿಗೆ ಬಳಸಿ. ನಿಮ್ಮ ಗುರಿಯನ್ನು ಆಗಾಗ ನೆನಪಿಸಿಕೊಳ್ಳಿ ಅದು ನಿಮ್ಮ ಯಶಸ್ಸಿಗೆ ಬೂಸ್ಟರ್ನಂತೆ ಕೆಲಸ ಮಾಡುತ್ತದೆ. ಸಮಾಜಕ್ಕೆ ಹೊಂದಿಕೊಂಡು ನಿಮ್ಮನ್ನು ನೀವು ಹೇಗೆ ಮುನ್ನೆಡೆಸಿಕೊಂಡು ಹೋಗುತ್ತೀರಿ ಎನ್ನುವುದೇ ನಿರ್ವಹಣೆ ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು.ಪುತ್ತೂರಿನ ವಿವೇಕಾನಂದ ಕಾಲೇಜಿನ ಬಿಬಿಎ ವಿಭಾಗ, ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಮತ್ತು ಐಕ್ಯೂಎಸಿ ವತಿಯಿಂದ “ಇಗ್ನೈಟಿಂಗ್ […]
ತಂತ್ರಜ್ಞಾನ ಬೆಳೆದಂತೆ ಉದ್ಯಮವೂ ಬೆಳೆಯುತ್ತದೆ: ಡಾ. ಬಾಲಸುಬ್ರಮಣ್ಯಂ

ಪುತ್ತೂರು: ನಮ್ಮ ಹಿರಿಯರು ಕೈಯಲ್ಲೇ ಭೂಮಿ ಅಗೆಯುತ್ತಿದ್ದರು, ಈಗ ಜೆಸಿಬಿಗಳು ಭೂಮಿಯನ್ನು ಅಗೆಯುತ್ತವೆ. ಮನುಷ್ಯರು ತಿಂಗಳುಗಟ್ಟಲೆ ಮಾಡುವ ಕೆಲಸವನ್ನು ದಿನವೊಂದರಲ್ಲೇ ಮಾಡಲು ಸಾಧ್ಯವಾಗಿದೆ. ಇದಕ್ಕೆ ಕಾರಣ ತಂತ್ರಜ್ಞಾನ. ಇದೇ ತಂತ್ರಜ್ಞಾನವೇ ಉದ್ಯಮದ ಸಕ್ಸಸ್ ಮಂತ್ರ. ಉದ್ಯಮಗಳಲ್ಲಿ ಹೊಸ ಹೊಸ ತಂತ್ರಜ್ಞಾನಗಳ ಅಳವಡಿಕೆಯಿಂದ ಕೆಲಸ ಸರಳವಾಗುತ್ತದೆ. ಇದರ ಪ್ರತಿಯಾಗಿ ಉದ್ಯಮವೂ ಹಾಗೆಯೇ ಅಭಿವೃದ್ಧಿ ಸಾಧಿಸುತ್ತದೆ. ಹಾಗೆಯೇ ನಾವೇ ನಿರ್ಮಿಸಿದ ಯಂತ್ರಗಳಿಗೂ ನಮ್ಮದೇ ಅನ್ನುವ ಸ್ವಾಧೀನತೆ ಇದ್ದರೆ ಒಳಿತು. ಇದು ಸ್ಪರ್ಧೆಯನ್ನು ಹೆಚ್ಚಿಸುತ್ತದೆ. ತಯಾರಿಸಿದವನಿಗೆ ಹೊಸ ಗುರುತನ್ನು ನೀಡುತ್ತದೆ ಎಂದು […]
ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ

ಪುತ್ತೂರು: ಪ್ರತಿಯೊಬ್ಬ ವ್ಯಕ್ತಿಯಲ್ಲೂ ಸಂಶೋಧನೆಯ ಗುಣ ಇರುತ್ತದೆ. ಅದು ಗೃಹಿಣಿಯೇ ಆಗಿರಲಿ, ಮೆಕ್ಯಾನಿಕ್ಕೇ ಆಗಿರಲಿ. ಆ ಸಂಶೋಧನೆಗೊಂದು ಮೂರ್ತರೂಪ ನೀಡುವ ಅಗತ್ಯವಿದೆ. ಅದನ್ನೇ ಈ ಸಂಶೋಧನಾ ಪ್ರಬಂಧಗಳು ಮಾಡುವುದು. ಸಂಶೋಧನೆ ಎನ್ನುವುದು ಒಂದು ಕೌಶಲ್ಯವಲ್ಲ ಅದೊಂದು ಹೊಸತನ. ಹೊಸತನವನ್ನು ಹುಡುಕುವ ಮಾರ್ಗ. ನಮ್ಮಲ್ಲಿನ ಎಲ್ಲ ಪ್ರಶ್ನೆಗಳಿಗೆ ಉತ್ತರವಿದೆ ಎಂದರೆ ಅಲ್ಲಿ ಸಂಶೋಧನೆಯನ್ನು ಮಾಡುವ ಅಗತ್ಯವೇ ಇಲ್ಲ. ಎಲ್ಲಿ ಪ್ರಶ್ನೆಗಳು ಮಾತ್ರ ಇವೆಯೋ, ಆ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದೆಯೋ, ಆ ಕ್ಷೇತ್ರದಲ್ಲಿ ಸಂಶೋಧನೆಯನ್ನು ಮಾಡಿದಾಗ ನಮ್ಮ ಸಂಶೋಧನೆಯ […]
ಕಬಡ್ಡಿ: ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಬೆಂಜನಪದವಿನÀ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.ಈ ವಿಜಯದೊಂದಿಗೆ ತಂಡವು ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆಯುವ ರಾಜ್ಯ […]
ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಉತ್ತಮಪ್ಲೇಸ್ಮೆಂಟ್: 100ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಉದ್ಯೋಗಕ್ಕೆ ಸೇರ್ಪಡೆ

ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ 2024- 25 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಆಟೋಮೊಬೈಲ್, ಮೆಕ್ಯಾನಿಕಲ್,ಸಿವಿಲ್, ಕಂಪ್ಯೂಟರ್ ಸೈನ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ಲೇಸ್ಮೆಂಟ್ ಕ್ಷೇತ್ರದಲ್ಲಿ ಭರ್ಜರಿ ಸಾಧನೆ ಮಾಡಿದೆ. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಾದ TOYOTA United,Bosch limited ,Forvia,Aarbee structure,TPO group,Toyota kirloskar motar ,mandovi motors ಇತ್ಯಾದಿಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಪ್ಲೇಸ್ಮೆಂಟ್ ಆಯ್ಕೆಯಾದ ವಿದ್ಯಾರ್ಥಿಗಳು ಕಂಪನಿ ಗಳಿಂದ ಮೆಚ್ಚುಗೆ ಪಡೆದು ತಮ್ಮ ತರಬೇತಿ ಗುಣಮಟ್ಟವನ್ನು ಪ್ರತಿಬಿಂಬಿಸಿದ್ದಾರೆ. ಈ […]
ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.ಉಡುಪಿ ಬಂಟಕಲ್ಲಿನ ಎಸ್ಎಂವಿಐಟಿಎಂ ನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ. ಮಂಗಳೂರು ವಿಭಾಗ ಮಟ್ಟದ ವಿವಿಧ ಎಂಜಿನಿಯರಿಂಗ್ ಕಾಲೇಜಿನ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಸುಜನ್.ಪಿ, ದ್ವಿತೀಯ ಕಂಪ್ಯೂಟರ್ ಸೈನ್ಸ್ ವೀಭಾಗದ […]