ಮಂಗಳೂರು ವಿವಿ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆ: ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ

Leaf
Leaf

ಪುತ್ತೂರು: ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿಸಿಎ ವಿಭಾಗದ ರಕ್ಷಾ.ಜಿ 87 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ, ದ್ವಿತೀಯ ಬಿಎ ವಿಭಾಗದ ರಿತೇಶ್ 81 ಕೆಜಿ ವಿಭಾಗದಲ್ಲಿ ಕಂಚಿನ ಪದಕ, ತೃತೀಯ ಬಿಎ ವಿಭಾಗದ ಗಣೇಶ್ ಪ್ರಸಾದ್ 89 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಹಾಗೂ ದ್ವಿತೀಯ ಬಿಕಾಂ ನ ಆಶಾ ಕಿರಣ 71 ಕೆಜಿ ವಿಭಾಗದಲ್ಲಿ ಐದನೇಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿಕುಮಾರಿ ಪಿ.ಸಿ ಹಾಗೂ ಯತೀಶ್ ಬಾರ್ತಿಕುಮೇರು ತರಬೇತಿಯನ್ನು ನೀಡಿರುತ್ತಾರೆ. ಸಾಧನೆಗೈದ ಕ್ರೀಡಾಪಟುಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕ ವೃಂದದವರು ವಿಶೇಷವಾಗಿ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ