ಪೋಷಕರ ಸಮಾವೇಶ

Leaf
Leaf

ಬಂಟ್ವಾಳ,ಆಗಸ್ಟ್ 24: ಜಗತ್ತು ಆಧುನಿಕ ದೃಷ್ಟಿಕೋನದತ್ತ ಚಿತ್ತ ಹಾಯಿಸುತ್ತಿದೆ . ಆಚಾರ ವಿಚಾರವನ್ನು ಮಕ್ಕಳಲ್ಲಿ ಮೂಡಿಸುವುದಕ್ಕಾಗಿ ಉತ್ತಮ ಶಿಕ್ಷಣ ನೀಡುವಲ್ಲಿ ಸಂಸ್ಥೆ ಸತತ ಪ್ರಯತ್ನ ಮಾಡುತ್ತಿದೆ. ಪೋಷಕರ ಪ್ರೋತ್ಸಾಹದಿಂದ ವಿದ್ಯಾರ್ಥಿಯು ಕಲಿತ ವಿಚಾರವನ್ನು ತನ್ನೊಳಗೆ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಮಕ್ಕಳ ಉನ್ನತಿ ಸಾಧ್ಯ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಹಾಗೂ ದಕ್ಷಿಣ ಮಧ್ಯಕ್ಷೇತ್ರೀಯ ಕಾರ್‍ಯಕಾರಿಣಿ ಸದಸ್ಯ ಡಾ|| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಇವರು ಶ್ರೀರಾಮ ಪದವಿ ಕಾಲೇಜಿನ ಪಾಲಕರ ಸಮಾವೇಶವನ್ಮು ಉದ್ದೇಶಿಸಿ ಮಾತನಾಡಿದರು.

DSCN0418

ಕಾರ್ಯಕ್ರಮದಲ್ಲಿ ಪೊಳಲಿ ರಾಮಕೃಷ್ಣ ತಪೋವನದ ಅಧ್ಯಕ್ಷ ಶ್ರೀವಿವೇಕ ಚೈತನ್ಯಾನಂದ ಜೀ ಮಹಾರಾಜ್, ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಾಹಣಾಧಿಕಾರಿ ವಸಂತ ಮಾಧವ ಹಾಗೂ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಉಪಸ್ಥಿತರಿದ್ದರು.

DSCN0417

ವಿದ್ಯಾರ್ಥಿಗಳ ಅಭಿವೃದ್ಧಿಯ ಧ್ಯೇಯದೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳ ಶೈಕ್ಷಣಿಕ ಕುಂದುಕೊರತಗಳ ಹಾಗೂ ಅವಶ್ಯಕತೆಗಳ ಬಗ್ಗೆ , ಅಭಿವೃದ್ಧಿಗೆ ಪೂರಕವಾದ ಮಾಹಿತಿಗಳನ್ನು ಪೋಷಕರು ಚರ್ಚಿಸಿದರು.

ರಾಜ್ಯಶಾಸ್ತ್ರ ಉಪನ್ಯಾಸಕಿ ಜಯಲಕ್ಷ್ಮೀ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ಪ್ರಾರ್ಥಿಸಿ, ವಾಣಿಜ್ಯ ಉಪನ್ಯಾಸಕಿ ಶೈಲಜಾ ವಂದಿಸಿ, ಕನ್ನಡ ಉಪನ್ಯಾಸಕ ಯತಿರಾಜ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Related News

News
20/02/2026

ವಿವೇಕಾನಂದ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕ- ರಾಷ್ಟ್ರೀಯ ವಿಚಾರ ಸಂಕಿರಣ

News and Events
16/02/2026

ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ

News, News and Events
16/02/2026